ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್: ಟ್ರೋಫಿಗೆ ಮುತ್ತಿಟ್ಟ ಸಾದಲಿ ತಂಡ

ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.

ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್‌ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.

ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.

ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.

ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.

Ramesh Babu

Journalist

Recent Posts

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

5 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

9 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

12 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 days ago