ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್: ಟ್ರೋಫಿಗೆ ಮುತ್ತಿಟ್ಟ ಸಾದಲಿ ತಂಡ

ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.

ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್‌ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.

ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.

ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.

ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

3 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

5 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

6 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

10 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

11 hours ago