ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.
ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.
ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.
ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.
ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.
ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.
ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.
ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.
ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.
ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…