ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್: ಟ್ರೋಫಿಗೆ ಮುತ್ತಿಟ್ಟ ಸಾದಲಿ ತಂಡ

ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.

ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್‌ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.

ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.

ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.

ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 hour ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago