ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್: ಟ್ರೋಫಿಗೆ ಮುತ್ತಿಟ್ಟ ಸಾದಲಿ ತಂಡ

ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.

ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್‌ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.

ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.

ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.

ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

6 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

7 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

20 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

20 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

21 hours ago