ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದ ಭಾರತ

ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.

ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (103) ಹಾಗೂ ಯಶಸ್ವಿ ಜೈಸ್ವಾಲ್ (57) ರನ್ ಗಳಿಸಿದರು, ನಂತರ ಬಂದ ಶುಭ್ಮನ್ ಗಿಲ್ (110), ಪಾದಾರ್ಪಣೆ ಪಂದ್ಯವಾಡಿದ ಕನ್ನಡಿಗ ದೇವದತ್ತ್ ಪಡಿಕಲ್ (65) ಹಾಗೂ ಸರ್ಫರಾಜ್ ಖಾನ್ (56) ರನ್ ಗಳಿಸಿ 470 ರ ಗಡಿ ದಾಟಿಸಿದರು.

259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.

ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.

ನೂರನೇ ಪಂದ್ಯವಾಡಿದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಎರಡೂ ಇನ್ನಿಂಗ್ಸ್ ನಲ್ಲಿ ಒಂಬತ್ತು ವಿಕೆಟ್ ಪಡೆದು ಮಿಂಚಿದರು, ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ರನ್ ಹೊಳೆ ಹರಿಸಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

8 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

15 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

16 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago