ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದ ಭಾರತ

ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.

ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (103) ಹಾಗೂ ಯಶಸ್ವಿ ಜೈಸ್ವಾಲ್ (57) ರನ್ ಗಳಿಸಿದರು, ನಂತರ ಬಂದ ಶುಭ್ಮನ್ ಗಿಲ್ (110), ಪಾದಾರ್ಪಣೆ ಪಂದ್ಯವಾಡಿದ ಕನ್ನಡಿಗ ದೇವದತ್ತ್ ಪಡಿಕಲ್ (65) ಹಾಗೂ ಸರ್ಫರಾಜ್ ಖಾನ್ (56) ರನ್ ಗಳಿಸಿ 470 ರ ಗಡಿ ದಾಟಿಸಿದರು.

259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.

ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.

ನೂರನೇ ಪಂದ್ಯವಾಡಿದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಎರಡೂ ಇನ್ನಿಂಗ್ಸ್ ನಲ್ಲಿ ಒಂಬತ್ತು ವಿಕೆಟ್ ಪಡೆದು ಮಿಂಚಿದರು, ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ರನ್ ಹೊಳೆ ಹರಿಸಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುಗಾದಿ, ರಂಜಾನ್ ಹಬ್ಬ ವಿಶೇಷ: ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಸರತ್ತು: ಬೆಳ್ಳಂಬೆಳಗ್ಗೆ ರೌಡಿ ಪರೇಡ್: 70ಕ್ಕೂ ಹೆಚ್ಚು ರೌಡಿಗಳಿಗೆ ಬೆವರಿಳಿಸಿದ ಡಿವೈಎಸ್ ಪಿ ಪಾಂಡುರಂಗ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…

55 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

9 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago