ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದ ಭಾರತ

ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.

ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (103) ಹಾಗೂ ಯಶಸ್ವಿ ಜೈಸ್ವಾಲ್ (57) ರನ್ ಗಳಿಸಿದರು, ನಂತರ ಬಂದ ಶುಭ್ಮನ್ ಗಿಲ್ (110), ಪಾದಾರ್ಪಣೆ ಪಂದ್ಯವಾಡಿದ ಕನ್ನಡಿಗ ದೇವದತ್ತ್ ಪಡಿಕಲ್ (65) ಹಾಗೂ ಸರ್ಫರಾಜ್ ಖಾನ್ (56) ರನ್ ಗಳಿಸಿ 470 ರ ಗಡಿ ದಾಟಿಸಿದರು.

259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.

ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.

ನೂರನೇ ಪಂದ್ಯವಾಡಿದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಎರಡೂ ಇನ್ನಿಂಗ್ಸ್ ನಲ್ಲಿ ಒಂಬತ್ತು ವಿಕೆಟ್ ಪಡೆದು ಮಿಂಚಿದರು, ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ರನ್ ಹೊಳೆ ಹರಿಸಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

9 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

15 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

18 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

22 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago