ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದ ಭಾರತ

ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.

ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (103) ಹಾಗೂ ಯಶಸ್ವಿ ಜೈಸ್ವಾಲ್ (57) ರನ್ ಗಳಿಸಿದರು, ನಂತರ ಬಂದ ಶುಭ್ಮನ್ ಗಿಲ್ (110), ಪಾದಾರ್ಪಣೆ ಪಂದ್ಯವಾಡಿದ ಕನ್ನಡಿಗ ದೇವದತ್ತ್ ಪಡಿಕಲ್ (65) ಹಾಗೂ ಸರ್ಫರಾಜ್ ಖಾನ್ (56) ರನ್ ಗಳಿಸಿ 470 ರ ಗಡಿ ದಾಟಿಸಿದರು.

259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.

ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.

ನೂರನೇ ಪಂದ್ಯವಾಡಿದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಎರಡೂ ಇನ್ನಿಂಗ್ಸ್ ನಲ್ಲಿ ಒಂಬತ್ತು ವಿಕೆಟ್ ಪಡೆದು ಮಿಂಚಿದರು, ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ರನ್ ಹೊಳೆ ಹರಿಸಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

2 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago