ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದ ಭಾರತ

ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.

ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (103) ಹಾಗೂ ಯಶಸ್ವಿ ಜೈಸ್ವಾಲ್ (57) ರನ್ ಗಳಿಸಿದರು, ನಂತರ ಬಂದ ಶುಭ್ಮನ್ ಗಿಲ್ (110), ಪಾದಾರ್ಪಣೆ ಪಂದ್ಯವಾಡಿದ ಕನ್ನಡಿಗ ದೇವದತ್ತ್ ಪಡಿಕಲ್ (65) ಹಾಗೂ ಸರ್ಫರಾಜ್ ಖಾನ್ (56) ರನ್ ಗಳಿಸಿ 470 ರ ಗಡಿ ದಾಟಿಸಿದರು.

259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.

ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.

ನೂರನೇ ಪಂದ್ಯವಾಡಿದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಎರಡೂ ಇನ್ನಿಂಗ್ಸ್ ನಲ್ಲಿ ಒಂಬತ್ತು ವಿಕೆಟ್ ಪಡೆದು ಮಿಂಚಿದರು, ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ರನ್ ಹೊಳೆ ಹರಿಸಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

2 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

11 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

17 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

18 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago