ಟೆಸ್ಟ್ ಕ್ರಿಕೆಟ್: ಜೈಸ್ವಾಲ್ ದ್ವಿಶತಕ, ಇಂಗ್ಲೆಂಡ್ ವಿರುದ್ಧ 2-1 ಮುನ್ನಡೆ ಸಾಧಿಸಿದ ಭಾರತ!

ರಾಜ್ ಕೋಟ್ ನ ನಿರಂಜನ್ ಶಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ವಿಶ್ವದಾಖಲೆಯ ದ್ವಿಶತಕ ಹಾಗೂ ಬೌಲರ್‌ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ 434 ರನ್ ಗೆಲುವು ಸಾಧಿಸುವ ಮೂಲಕ ರೋಹಿತ್ ಪಡೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ, ಮೊದಲ ಇನಿಂಗ್ಸ್ ನಲ್ಲಿ ನಾಯಕ ರೋಹಿತ್ ಶರ್ಮಾ (131), ಆಲ್ ರೌಂಡರ್ ರವೀಂದ್ರ ಜಡೇಜಾ (112) ಹಾಗೂ ಪಾದಾರ್ಪಣೆ ಪಂದ್ಯವಾಡಿದ ಸಫ೯ರಾಜ್ ಖಾನ್ (62) ಅರ್ಧಶತಕ ಗಳಿಸಿ, 445 ಗುರಿ ನೀಡಲಾಯಿತು.

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಡಕೆಟ್ (153) ರನ್ ಗಳಿಸಿದರೆ ಉಳಿದ ಬ್ಯಾಟ್ಸ್‌ಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 319 ರನ್ ಪೇರಿಸಿ 126 ರನ್ ಹಿನ್ನಡೆ ಅನುಭವಿಸಿತು.

ಭಾರತದ ಪರವಾಗಿ ವೇಗಿ ಮೊಹಮ್ಮದ್ ಸಿರಾಜ್(4) , ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

126 ರನ್ ಮುನ್ನಡೆಯೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (19) ಬೇಗನೆ ವಿಕೆಟ್ ಒಪ್ಪಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆಯ 14 ಬೌಂಡರಿ ಹಾಗೂ 12 ಸಿಕ್ಸರ್ ನೆರವಿನಿಂದ ಅಜೇಯ 214 ರನ್ ಗಳಿಸಿದರೆ , ಶುಭ್ಮನ್ ಗಿಲ್ (91) ಹಾಗೂ ಸಪ೯ರಾಜ್ ಖಾನ್ ಅಜೇಯ (68) ರನ್ ಗಳಿಸಿ ತಂಡದ ಮೊತ್ತವನ್ನು 550ರ ಗಡಿ ದಾಟಿಸಿ ಡಿಕ್ಲೇರ್ ಮಾಡಿಕೊಂಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರು ಬೇಗನೇ ವಿಕೆಟ್ ಒಪ್ಪಿಸಿದರು, ವೇಗಿ ಮಾಕ್೯ವುಡ್ (33)ಹೊರತುಪಡಿಸಿ ಬೇರೆ ಯಾರು ಮೂವತ್ತು ರನ್ ದಾಟಲಿಲ್ಲ, 122ರನ್ ಗಳಿಸಿ ತಂಡ ಆಲೌಟ್ ಆಯಿತು, ಭಾರತದ ಪರವಾಗಿ ರವೀಂದ್ರ ಜಡೇಜಾ 5 ವಿಕೆಟ್, ಕುಲದೀಪ್ ಯಾದವ್ 2 ವಿಕೆಟ್, ಬುಮ್ರಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಆಲ್ ರೌಂಡರ್ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

37 minutes ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

3 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

15 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

17 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

18 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 day ago