ಟೆಸ್ಟ್ ಕ್ರಿಕೆಟ್: ಜೈಸ್ವಾಲ್ ದ್ವಿಶತಕ, ಇಂಗ್ಲೆಂಡ್ ವಿರುದ್ಧ 2-1 ಮುನ್ನಡೆ ಸಾಧಿಸಿದ ಭಾರತ!

ರಾಜ್ ಕೋಟ್ ನ ನಿರಂಜನ್ ಶಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ವಿಶ್ವದಾಖಲೆಯ ದ್ವಿಶತಕ ಹಾಗೂ ಬೌಲರ್‌ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ 434 ರನ್ ಗೆಲುವು ಸಾಧಿಸುವ ಮೂಲಕ ರೋಹಿತ್ ಪಡೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ, ಮೊದಲ ಇನಿಂಗ್ಸ್ ನಲ್ಲಿ ನಾಯಕ ರೋಹಿತ್ ಶರ್ಮಾ (131), ಆಲ್ ರೌಂಡರ್ ರವೀಂದ್ರ ಜಡೇಜಾ (112) ಹಾಗೂ ಪಾದಾರ್ಪಣೆ ಪಂದ್ಯವಾಡಿದ ಸಫ೯ರಾಜ್ ಖಾನ್ (62) ಅರ್ಧಶತಕ ಗಳಿಸಿ, 445 ಗುರಿ ನೀಡಲಾಯಿತು.

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಡಕೆಟ್ (153) ರನ್ ಗಳಿಸಿದರೆ ಉಳಿದ ಬ್ಯಾಟ್ಸ್‌ಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 319 ರನ್ ಪೇರಿಸಿ 126 ರನ್ ಹಿನ್ನಡೆ ಅನುಭವಿಸಿತು.

ಭಾರತದ ಪರವಾಗಿ ವೇಗಿ ಮೊಹಮ್ಮದ್ ಸಿರಾಜ್(4) , ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

126 ರನ್ ಮುನ್ನಡೆಯೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (19) ಬೇಗನೆ ವಿಕೆಟ್ ಒಪ್ಪಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆಯ 14 ಬೌಂಡರಿ ಹಾಗೂ 12 ಸಿಕ್ಸರ್ ನೆರವಿನಿಂದ ಅಜೇಯ 214 ರನ್ ಗಳಿಸಿದರೆ , ಶುಭ್ಮನ್ ಗಿಲ್ (91) ಹಾಗೂ ಸಪ೯ರಾಜ್ ಖಾನ್ ಅಜೇಯ (68) ರನ್ ಗಳಿಸಿ ತಂಡದ ಮೊತ್ತವನ್ನು 550ರ ಗಡಿ ದಾಟಿಸಿ ಡಿಕ್ಲೇರ್ ಮಾಡಿಕೊಂಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರು ಬೇಗನೇ ವಿಕೆಟ್ ಒಪ್ಪಿಸಿದರು, ವೇಗಿ ಮಾಕ್೯ವುಡ್ (33)ಹೊರತುಪಡಿಸಿ ಬೇರೆ ಯಾರು ಮೂವತ್ತು ರನ್ ದಾಟಲಿಲ್ಲ, 122ರನ್ ಗಳಿಸಿ ತಂಡ ಆಲೌಟ್ ಆಯಿತು, ಭಾರತದ ಪರವಾಗಿ ರವೀಂದ್ರ ಜಡೇಜಾ 5 ವಿಕೆಟ್, ಕುಲದೀಪ್ ಯಾದವ್ 2 ವಿಕೆಟ್, ಬುಮ್ರಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಆಲ್ ರೌಂಡರ್ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

8 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

10 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

10 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

12 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

20 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago