ಟೆಸ್ಟ್ ಕ್ರಿಕೆಟ್: ಜೈಸ್ವಾಲ್ ದ್ವಿಶತಕ, ಇಂಗ್ಲೆಂಡ್ ವಿರುದ್ಧ 2-1 ಮುನ್ನಡೆ ಸಾಧಿಸಿದ ಭಾರತ!

ರಾಜ್ ಕೋಟ್ ನ ನಿರಂಜನ್ ಶಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ವಿಶ್ವದಾಖಲೆಯ ದ್ವಿಶತಕ ಹಾಗೂ ಬೌಲರ್‌ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ 434 ರನ್ ಗೆಲುವು ಸಾಧಿಸುವ ಮೂಲಕ ರೋಹಿತ್ ಪಡೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ, ಮೊದಲ ಇನಿಂಗ್ಸ್ ನಲ್ಲಿ ನಾಯಕ ರೋಹಿತ್ ಶರ್ಮಾ (131), ಆಲ್ ರೌಂಡರ್ ರವೀಂದ್ರ ಜಡೇಜಾ (112) ಹಾಗೂ ಪಾದಾರ್ಪಣೆ ಪಂದ್ಯವಾಡಿದ ಸಫ೯ರಾಜ್ ಖಾನ್ (62) ಅರ್ಧಶತಕ ಗಳಿಸಿ, 445 ಗುರಿ ನೀಡಲಾಯಿತು.

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಡಕೆಟ್ (153) ರನ್ ಗಳಿಸಿದರೆ ಉಳಿದ ಬ್ಯಾಟ್ಸ್‌ಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 319 ರನ್ ಪೇರಿಸಿ 126 ರನ್ ಹಿನ್ನಡೆ ಅನುಭವಿಸಿತು.

ಭಾರತದ ಪರವಾಗಿ ವೇಗಿ ಮೊಹಮ್ಮದ್ ಸಿರಾಜ್(4) , ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

126 ರನ್ ಮುನ್ನಡೆಯೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (19) ಬೇಗನೆ ವಿಕೆಟ್ ಒಪ್ಪಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆಯ 14 ಬೌಂಡರಿ ಹಾಗೂ 12 ಸಿಕ್ಸರ್ ನೆರವಿನಿಂದ ಅಜೇಯ 214 ರನ್ ಗಳಿಸಿದರೆ , ಶುಭ್ಮನ್ ಗಿಲ್ (91) ಹಾಗೂ ಸಪ೯ರಾಜ್ ಖಾನ್ ಅಜೇಯ (68) ರನ್ ಗಳಿಸಿ ತಂಡದ ಮೊತ್ತವನ್ನು 550ರ ಗಡಿ ದಾಟಿಸಿ ಡಿಕ್ಲೇರ್ ಮಾಡಿಕೊಂಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರು ಬೇಗನೇ ವಿಕೆಟ್ ಒಪ್ಪಿಸಿದರು, ವೇಗಿ ಮಾಕ್೯ವುಡ್ (33)ಹೊರತುಪಡಿಸಿ ಬೇರೆ ಯಾರು ಮೂವತ್ತು ರನ್ ದಾಟಲಿಲ್ಲ, 122ರನ್ ಗಳಿಸಿ ತಂಡ ಆಲೌಟ್ ಆಯಿತು, ಭಾರತದ ಪರವಾಗಿ ರವೀಂದ್ರ ಜಡೇಜಾ 5 ವಿಕೆಟ್, ಕುಲದೀಪ್ ಯಾದವ್ 2 ವಿಕೆಟ್, ಬುಮ್ರಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಆಲ್ ರೌಂಡರ್ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

20 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago