ಟೆಸ್ಟ್ ಕ್ರಿಕೆಟ್: ಜೈಸ್ವಾಲ್ ದ್ವಿಶತಕ, ಇಂಗ್ಲೆಂಡ್ ವಿರುದ್ಧ 2-1 ಮುನ್ನಡೆ ಸಾಧಿಸಿದ ಭಾರತ!

ರಾಜ್ ಕೋಟ್ ನ ನಿರಂಜನ್ ಶಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ವಿಶ್ವದಾಖಲೆಯ ದ್ವಿಶತಕ ಹಾಗೂ ಬೌಲರ್‌ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ 434 ರನ್ ಗೆಲುವು ಸಾಧಿಸುವ ಮೂಲಕ ರೋಹಿತ್ ಪಡೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ, ಮೊದಲ ಇನಿಂಗ್ಸ್ ನಲ್ಲಿ ನಾಯಕ ರೋಹಿತ್ ಶರ್ಮಾ (131), ಆಲ್ ರೌಂಡರ್ ರವೀಂದ್ರ ಜಡೇಜಾ (112) ಹಾಗೂ ಪಾದಾರ್ಪಣೆ ಪಂದ್ಯವಾಡಿದ ಸಫ೯ರಾಜ್ ಖಾನ್ (62) ಅರ್ಧಶತಕ ಗಳಿಸಿ, 445 ಗುರಿ ನೀಡಲಾಯಿತು.

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಡಕೆಟ್ (153) ರನ್ ಗಳಿಸಿದರೆ ಉಳಿದ ಬ್ಯಾಟ್ಸ್‌ಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 319 ರನ್ ಪೇರಿಸಿ 126 ರನ್ ಹಿನ್ನಡೆ ಅನುಭವಿಸಿತು.

ಭಾರತದ ಪರವಾಗಿ ವೇಗಿ ಮೊಹಮ್ಮದ್ ಸಿರಾಜ್(4) , ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

126 ರನ್ ಮುನ್ನಡೆಯೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (19) ಬೇಗನೆ ವಿಕೆಟ್ ಒಪ್ಪಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆಯ 14 ಬೌಂಡರಿ ಹಾಗೂ 12 ಸಿಕ್ಸರ್ ನೆರವಿನಿಂದ ಅಜೇಯ 214 ರನ್ ಗಳಿಸಿದರೆ , ಶುಭ್ಮನ್ ಗಿಲ್ (91) ಹಾಗೂ ಸಪ೯ರಾಜ್ ಖಾನ್ ಅಜೇಯ (68) ರನ್ ಗಳಿಸಿ ತಂಡದ ಮೊತ್ತವನ್ನು 550ರ ಗಡಿ ದಾಟಿಸಿ ಡಿಕ್ಲೇರ್ ಮಾಡಿಕೊಂಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರು ಬೇಗನೇ ವಿಕೆಟ್ ಒಪ್ಪಿಸಿದರು, ವೇಗಿ ಮಾಕ್೯ವುಡ್ (33)ಹೊರತುಪಡಿಸಿ ಬೇರೆ ಯಾರು ಮೂವತ್ತು ರನ್ ದಾಟಲಿಲ್ಲ, 122ರನ್ ಗಳಿಸಿ ತಂಡ ಆಲೌಟ್ ಆಯಿತು, ಭಾರತದ ಪರವಾಗಿ ರವೀಂದ್ರ ಜಡೇಜಾ 5 ವಿಕೆಟ್, ಕುಲದೀಪ್ ಯಾದವ್ 2 ವಿಕೆಟ್, ಬುಮ್ರಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಆಲ್ ರೌಂಡರ್ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

8 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

11 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago