ಟೆಸ್ಟ್ ಕ್ರಿಕೆಟ್: ಜೈಸ್ವಾಲ್ ದ್ವಿಶತಕ, ಇಂಗ್ಲೆಂಡ್ ವಿರುದ್ಧ 2-1 ಮುನ್ನಡೆ ಸಾಧಿಸಿದ ಭಾರತ!

ರಾಜ್ ಕೋಟ್ ನ ನಿರಂಜನ್ ಶಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ವಿಶ್ವದಾಖಲೆಯ ದ್ವಿಶತಕ ಹಾಗೂ ಬೌಲರ್‌ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ 434 ರನ್ ಗೆಲುವು ಸಾಧಿಸುವ ಮೂಲಕ ರೋಹಿತ್ ಪಡೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ, ಮೊದಲ ಇನಿಂಗ್ಸ್ ನಲ್ಲಿ ನಾಯಕ ರೋಹಿತ್ ಶರ್ಮಾ (131), ಆಲ್ ರೌಂಡರ್ ರವೀಂದ್ರ ಜಡೇಜಾ (112) ಹಾಗೂ ಪಾದಾರ್ಪಣೆ ಪಂದ್ಯವಾಡಿದ ಸಫ೯ರಾಜ್ ಖಾನ್ (62) ಅರ್ಧಶತಕ ಗಳಿಸಿ, 445 ಗುರಿ ನೀಡಲಾಯಿತು.

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಡಕೆಟ್ (153) ರನ್ ಗಳಿಸಿದರೆ ಉಳಿದ ಬ್ಯಾಟ್ಸ್‌ಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 319 ರನ್ ಪೇರಿಸಿ 126 ರನ್ ಹಿನ್ನಡೆ ಅನುಭವಿಸಿತು.

ಭಾರತದ ಪರವಾಗಿ ವೇಗಿ ಮೊಹಮ್ಮದ್ ಸಿರಾಜ್(4) , ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

126 ರನ್ ಮುನ್ನಡೆಯೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (19) ಬೇಗನೆ ವಿಕೆಟ್ ಒಪ್ಪಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆಯ 14 ಬೌಂಡರಿ ಹಾಗೂ 12 ಸಿಕ್ಸರ್ ನೆರವಿನಿಂದ ಅಜೇಯ 214 ರನ್ ಗಳಿಸಿದರೆ , ಶುಭ್ಮನ್ ಗಿಲ್ (91) ಹಾಗೂ ಸಪ೯ರಾಜ್ ಖಾನ್ ಅಜೇಯ (68) ರನ್ ಗಳಿಸಿ ತಂಡದ ಮೊತ್ತವನ್ನು 550ರ ಗಡಿ ದಾಟಿಸಿ ಡಿಕ್ಲೇರ್ ಮಾಡಿಕೊಂಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರು ಬೇಗನೇ ವಿಕೆಟ್ ಒಪ್ಪಿಸಿದರು, ವೇಗಿ ಮಾಕ್೯ವುಡ್ (33)ಹೊರತುಪಡಿಸಿ ಬೇರೆ ಯಾರು ಮೂವತ್ತು ರನ್ ದಾಟಲಿಲ್ಲ, 122ರನ್ ಗಳಿಸಿ ತಂಡ ಆಲೌಟ್ ಆಯಿತು, ಭಾರತದ ಪರವಾಗಿ ರವೀಂದ್ರ ಜಡೇಜಾ 5 ವಿಕೆಟ್, ಕುಲದೀಪ್ ಯಾದವ್ 2 ವಿಕೆಟ್, ಬುಮ್ರಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಆಲ್ ರೌಂಡರ್ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago