ರಾಜ್ ಕೋಟ್ ನ ನಿರಂಜನ್ ಶಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ವಿಶ್ವದಾಖಲೆಯ ದ್ವಿಶತಕ ಹಾಗೂ ಬೌಲರ್ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ 434 ರನ್ ಗೆಲುವು ಸಾಧಿಸುವ ಮೂಲಕ ರೋಹಿತ್ ಪಡೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ, ಮೊದಲ ಇನಿಂಗ್ಸ್ ನಲ್ಲಿ ನಾಯಕ ರೋಹಿತ್ ಶರ್ಮಾ (131), ಆಲ್ ರೌಂಡರ್ ರವೀಂದ್ರ ಜಡೇಜಾ (112) ಹಾಗೂ ಪಾದಾರ್ಪಣೆ ಪಂದ್ಯವಾಡಿದ ಸಫ೯ರಾಜ್ ಖಾನ್ (62) ಅರ್ಧಶತಕ ಗಳಿಸಿ, 445 ಗುರಿ ನೀಡಲಾಯಿತು.
ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಡಕೆಟ್ (153) ರನ್ ಗಳಿಸಿದರೆ ಉಳಿದ ಬ್ಯಾಟ್ಸ್ಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 319 ರನ್ ಪೇರಿಸಿ 126 ರನ್ ಹಿನ್ನಡೆ ಅನುಭವಿಸಿತು.
126 ರನ್ ಮುನ್ನಡೆಯೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (19) ಬೇಗನೆ ವಿಕೆಟ್ ಒಪ್ಪಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆಯ 14 ಬೌಂಡರಿ ಹಾಗೂ 12 ಸಿಕ್ಸರ್ ನೆರವಿನಿಂದ ಅಜೇಯ 214 ರನ್ ಗಳಿಸಿದರೆ , ಶುಭ್ಮನ್ ಗಿಲ್ (91) ಹಾಗೂ ಸಪ೯ರಾಜ್ ಖಾನ್ ಅಜೇಯ (68) ರನ್ ಗಳಿಸಿ ತಂಡದ ಮೊತ್ತವನ್ನು 550ರ ಗಡಿ ದಾಟಿಸಿ ಡಿಕ್ಲೇರ್ ಮಾಡಿಕೊಂಡಿತು.
ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಆಲ್ ರೌಂಡರ್ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…