ಟೆಸ್ಟ್ ಸರಣಿ ಜಯಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಅಹಮದಾಬಾದ್ : ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಮಿಂಚಿದ ಎರಡೂ ತಂಡಗಳ ಬ್ಯಾಟ್ಸ್‌ಮನ್ ಗಳ ಫಲವಾಗಿ ನಾಲ್ಕನೇ ಪಂದ್ಯದಲ್ಲಿ ಡ್ರಾ ಸಾಧಿಸಿ ಸರಣಿಯನ್ನು 2-1 ಅಂತರದಲ್ಲಿ ಗೆದ್ದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆಯಿಟ್ಟಿದೆ.

ಅಹಮದಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಪಂದ್ಯದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಚಾಲನೆ ನೀಡಿ ಕೆಲ ಸಮಯ ಪಂದ್ಯವನ್ನು ವೀಕ್ಷಣೆ ಮಾಡಿದ್ದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯ ಉತ್ತಮ ಆರಂಭ ಪಡೆಯಿತು, ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಕ್ವಾಜಾ ಅವರ 180 ರನ್ ಹಾಗೂ ಕೆಮರೂನ್ ಗ್ರೀನ್ ಅವರ 114 ರನ್ ಗಳ ಉಪಯುಕ್ತ ದ್ವಿಶತಕದ ಜೊತೆಯಾಟದ ನೆರವಿನಿಂದ ತಂಡದ ಮೊತ್ತ 480 ರನ್ ಗಳಿಸಿದರು. ಭಾರತದ ಪರವಾಗಿ ಅಶ್ವಿನ್ 6 ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರ 126 ರನ್ ಹಾಗೂ ವಿರಾಟ್ ಕೊಹ್ಲಿ ಅವರ 186 ರನ್ ಸೊಗಸಾದ ಶತಕದ ಎದುರು ಮಂಕಾದ ಆಸೀಸ್ ಪಡೆ ವಿಕೆಟ್ ಪಡೆಯಲು ಪರದಾಡಿದರು, ನಾಯಕ ರೋಹಿತ್ ಶರ್ಮಾ 35, ಚತೇಶ್ವರ ಪೂಜಾರ 42, ಅಕ್ಷರ್ ಪಟೇಲ್ 79 ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಶ್ರೀಕರ್ ಭರತ್ 44 ರನ್ ಕಾಣಿಕೆ ನೀಡಿದರು ಇದರ ಫಲವಾಗಿ ಭಾರತ 571 ರನ್ ಗಳಿಸಿ 90ರನ್ ಮುನ್ನಡೆ ಸಾಧಿಸಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಬೃಹತ್ ಮೊತ್ತದ ಮುನ್ಸೂಚನೆ ನೀಡಿತು ಕೊನೆಯ ದಿನವಾದ್ದರಿಂದ ಉಭಯ ತಂಡಗಳ ನಾಯಕರು ಪಂದ್ಯ ಡ್ರಾ ಮಾಡಿಕೊಂಡರು. ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಆಪ್ ಸ್ಪಿನ್ನರ್ ಆರ್ ಅಶ್ವಿನ್ ಜಂಟಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

11 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago