ಟೆಸ್ಟ್ ಸರಣಿ ಜಯಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಅಹಮದಾಬಾದ್ : ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಮಿಂಚಿದ ಎರಡೂ ತಂಡಗಳ ಬ್ಯಾಟ್ಸ್‌ಮನ್ ಗಳ ಫಲವಾಗಿ ನಾಲ್ಕನೇ ಪಂದ್ಯದಲ್ಲಿ ಡ್ರಾ ಸಾಧಿಸಿ ಸರಣಿಯನ್ನು 2-1 ಅಂತರದಲ್ಲಿ ಗೆದ್ದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆಯಿಟ್ಟಿದೆ.

ಅಹಮದಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಪಂದ್ಯದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಚಾಲನೆ ನೀಡಿ ಕೆಲ ಸಮಯ ಪಂದ್ಯವನ್ನು ವೀಕ್ಷಣೆ ಮಾಡಿದ್ದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯ ಉತ್ತಮ ಆರಂಭ ಪಡೆಯಿತು, ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಕ್ವಾಜಾ ಅವರ 180 ರನ್ ಹಾಗೂ ಕೆಮರೂನ್ ಗ್ರೀನ್ ಅವರ 114 ರನ್ ಗಳ ಉಪಯುಕ್ತ ದ್ವಿಶತಕದ ಜೊತೆಯಾಟದ ನೆರವಿನಿಂದ ತಂಡದ ಮೊತ್ತ 480 ರನ್ ಗಳಿಸಿದರು. ಭಾರತದ ಪರವಾಗಿ ಅಶ್ವಿನ್ 6 ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರ 126 ರನ್ ಹಾಗೂ ವಿರಾಟ್ ಕೊಹ್ಲಿ ಅವರ 186 ರನ್ ಸೊಗಸಾದ ಶತಕದ ಎದುರು ಮಂಕಾದ ಆಸೀಸ್ ಪಡೆ ವಿಕೆಟ್ ಪಡೆಯಲು ಪರದಾಡಿದರು, ನಾಯಕ ರೋಹಿತ್ ಶರ್ಮಾ 35, ಚತೇಶ್ವರ ಪೂಜಾರ 42, ಅಕ್ಷರ್ ಪಟೇಲ್ 79 ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಶ್ರೀಕರ್ ಭರತ್ 44 ರನ್ ಕಾಣಿಕೆ ನೀಡಿದರು ಇದರ ಫಲವಾಗಿ ಭಾರತ 571 ರನ್ ಗಳಿಸಿ 90ರನ್ ಮುನ್ನಡೆ ಸಾಧಿಸಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಬೃಹತ್ ಮೊತ್ತದ ಮುನ್ಸೂಚನೆ ನೀಡಿತು ಕೊನೆಯ ದಿನವಾದ್ದರಿಂದ ಉಭಯ ತಂಡಗಳ ನಾಯಕರು ಪಂದ್ಯ ಡ್ರಾ ಮಾಡಿಕೊಂಡರು. ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಆಪ್ ಸ್ಪಿನ್ನರ್ ಆರ್ ಅಶ್ವಿನ್ ಜಂಟಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

18 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago