ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ಸಿನ ಟೈರ್ ಆಕಸ್ಮಿಕವಾಗಿ ಬ್ಲಾಸ್ಟ್ ಆಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ಎಚ್ 50 ರಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಕ್ಷಣ ಮಾತ್ರದಲ್ಲಿ ಇಡೀ ಬಸ್ಸಿಗೆ ಬೆಂಕಿ ವ್ಯಾಪಿಸಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಗಾಬರಿಗೊಂಡ ಪ್ರಯಾಣಿಕರು ಕೆಳಗಿಳಿದು ತಮ್ಮ ಪ್ರಾಣ ಕಾಪಾಡಿಕೊಂಡಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಪ್ರಯಾಣಿಕರ ಲಗೇಜ್, ಬೆಲೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕದಳ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…