ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿ ರೈತರಿಗೆ ಒಳ್ಳೆ ಆದಾಯ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಆಶಯ ವ್ಯಕ್ತಪಡಿಸಿದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಜಿ.ಹನುಮಂತರಾಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ, ಹಾಡೋನಹಳ್ಳಿ ಇವರ ವತಿಯಿಂದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ 95ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಂತ್ರಜ್ಞಾನ ದಿನವನ್ನು ಆಯೋಜಿಸಿ ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಂತರ ತೋಟಗಾರಿಕೆ ಇಲಾಖಾ ಉಪನಿರ್ದೇಶಕ ಜೆ. ಗುಣವಂತ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಉತ್ತಮ ಇಳುವರಿ ಪಡೆಯುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತೋಟಗಾರಿಕಾ ಇಲಾಖೆಯ ವತಿಯಿಂದ ದೊರಕುವ ಎಲ್ಲಾ ಸವಲತ್ತುಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಪ್ರಸ್ತುತ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬಾಧಿಸುತ್ತಿರುವ ಎಲೆಮುಟುರು ನಂಜುರೋಗ ಮತ್ತು ಬಿಳಿನೊಣ ಬಾಧೆಯನ್ನು ತಡೆಗಟ್ಟಲು ಅನುಸರಿಸಬೇಕಾದ ಸಮಗ್ರ ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ವಿವರಿಸಲಾಯಿತು.
ತರಬೇತಿಯಲ್ಲಿ ಟೊಮೆಟೊ ಬೆಳೆಯಲ್ಲಿ ಕಂಡು ಬರುವ ವಿವಿಧ ಕೀಟ ಮತ್ತು ರೋಗ ಬಾಧಿತ ಮಾದರಿಯನ್ನು ಪ್ರದರ್ಶಿಸಲಾಯಿತು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…