ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿ ರೈತರಿಗೆ ಒಳ್ಳೆ ಆದಾಯ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಆಶಯ ವ್ಯಕ್ತಪಡಿಸಿದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಜಿ.ಹನುಮಂತರಾಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ, ಹಾಡೋನಹಳ್ಳಿ ಇವರ ವತಿಯಿಂದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ 95ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಂತ್ರಜ್ಞಾನ ದಿನವನ್ನು ಆಯೋಜಿಸಿ ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಂತರ ತೋಟಗಾರಿಕೆ ಇಲಾಖಾ ಉಪನಿರ್ದೇಶಕ ಜೆ. ಗುಣವಂತ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಉತ್ತಮ ಇಳುವರಿ ಪಡೆಯುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತೋಟಗಾರಿಕಾ ಇಲಾಖೆಯ ವತಿಯಿಂದ ದೊರಕುವ ಎಲ್ಲಾ ಸವಲತ್ತುಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಪ್ರಸ್ತುತ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬಾಧಿಸುತ್ತಿರುವ ಎಲೆಮುಟುರು ನಂಜುರೋಗ ಮತ್ತು ಬಿಳಿನೊಣ ಬಾಧೆಯನ್ನು ತಡೆಗಟ್ಟಲು ಅನುಸರಿಸಬೇಕಾದ ಸಮಗ್ರ ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ವಿವರಿಸಲಾಯಿತು.
ತರಬೇತಿಯಲ್ಲಿ ಟೊಮೆಟೊ ಬೆಳೆಯಲ್ಲಿ ಕಂಡು ಬರುವ ವಿವಿಧ ಕೀಟ ಮತ್ತು ರೋಗ ಬಾಧಿತ ಮಾದರಿಯನ್ನು ಪ್ರದರ್ಶಿಸಲಾಯಿತು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…