ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ತರಬೇತಿ

ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿ ರೈತರಿಗೆ ಒಳ್ಳೆ ಆದಾಯ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಆಶಯ ವ್ಯಕ್ತಪಡಿಸಿದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಜಿ.ಹನುಮಂತರಾಯ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ, ಹಾಡೋನಹಳ್ಳಿ ಇವರ ವತಿಯಿಂದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ 95ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಂತ್ರಜ್ಞಾನ ದಿನವನ್ನು ಆಯೋಜಿಸಿ ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಂತರ ತೋಟಗಾರಿಕೆ ಇಲಾಖಾ ಉಪನಿರ್ದೇಶಕ ಜೆ. ಗುಣವಂತ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಉತ್ತಮ ಇಳುವರಿ ಪಡೆಯುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ತೋಟಗಾರಿಕಾ ಇಲಾಖೆಯ ವತಿಯಿಂದ ದೊರಕುವ ಎಲ್ಲಾ ಸವಲತ್ತುಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಹಿರಿಯ ವಿಜ್ಞಾನಿ ಡಾ. ಬಿ.ಜಿ. ಹನುಮಂತರಾಯರ ಅವರು ಟೊಮೆಟೊ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಡಾ. ವೀರನಾಗಪ್ಪ, ಪಿ.ರವರು ಟೊಮೆಟೊ ಬೆಳೆಯ ಪೋಷಕಾಂಶ ನಿರ್ವಹಣೆ ಬಗ್ಗೆ ವಿವರಿಸಿದರು. ಡಾ. ದರ್ಶಿನಿ, ಜಿ.ಎಂ., ವಿಜ್ಞಾನಿ (ಸಸ್ಯ ಸಂರಕ್ಷಣೆ),ರವರು ಟೊಮೆಟೊ ಬೆಳೆಯಲ್ಲಿ ಕಂಡು ಬರುವ ಕೀಟ ಮತ್ತು ರೋಗ ಲಕ್ಷಣಗಳನ್ನು ಗುರುತಿಸುವಿಕೆ ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಪ್ರಸ್ತುತ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬಾಧಿಸುತ್ತಿರುವ ಎಲೆಮುಟುರು ನಂಜುರೋಗ ಮತ್ತು ಬಿಳಿನೊಣ ಬಾಧೆಯನ್ನು ತಡೆಗಟ್ಟಲು ಅನುಸರಿಸಬೇಕಾದ ಸಮಗ್ರ ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ವಿವರಿಸಲಾಯಿತು.

ತರಬೇತಿಯಲ್ಲಿ ಟೊಮೆಟೊ ಬೆಳೆಯಲ್ಲಿ ಕಂಡು ಬರುವ ವಿವಿಧ ಕೀಟ ಮತ್ತು ರೋಗ ಬಾಧಿತ ಮಾದರಿಯನ್ನು ಪ್ರದರ್ಶಿಸಲಾಯಿತು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago