ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿ ರೈತರಿಗೆ ಒಳ್ಳೆ ಆದಾಯ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಆಶಯ ವ್ಯಕ್ತಪಡಿಸಿದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಜಿ.ಹನುಮಂತರಾಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ, ಹಾಡೋನಹಳ್ಳಿ ಇವರ ವತಿಯಿಂದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ 95ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಂತ್ರಜ್ಞಾನ ದಿನವನ್ನು ಆಯೋಜಿಸಿ ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಂತರ ತೋಟಗಾರಿಕೆ ಇಲಾಖಾ ಉಪನಿರ್ದೇಶಕ ಜೆ. ಗುಣವಂತ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಉತ್ತಮ ಇಳುವರಿ ಪಡೆಯುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತೋಟಗಾರಿಕಾ ಇಲಾಖೆಯ ವತಿಯಿಂದ ದೊರಕುವ ಎಲ್ಲಾ ಸವಲತ್ತುಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಪ್ರಸ್ತುತ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬಾಧಿಸುತ್ತಿರುವ ಎಲೆಮುಟುರು ನಂಜುರೋಗ ಮತ್ತು ಬಿಳಿನೊಣ ಬಾಧೆಯನ್ನು ತಡೆಗಟ್ಟಲು ಅನುಸರಿಸಬೇಕಾದ ಸಮಗ್ರ ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ವಿವರಿಸಲಾಯಿತು.
ತರಬೇತಿಯಲ್ಲಿ ಟೊಮೆಟೊ ಬೆಳೆಯಲ್ಲಿ ಕಂಡು ಬರುವ ವಿವಿಧ ಕೀಟ ಮತ್ತು ರೋಗ ಬಾಧಿತ ಮಾದರಿಯನ್ನು ಪ್ರದರ್ಶಿಸಲಾಯಿತು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…