ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ತರಬೇತಿ

ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿ ರೈತರಿಗೆ ಒಳ್ಳೆ ಆದಾಯ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಆಶಯ ವ್ಯಕ್ತಪಡಿಸಿದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಜಿ.ಹನುಮಂತರಾಯ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ, ಹಾಡೋನಹಳ್ಳಿ ಇವರ ವತಿಯಿಂದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ 95ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಂತ್ರಜ್ಞಾನ ದಿನವನ್ನು ಆಯೋಜಿಸಿ ಟೊಮೆಟೊ ಬೆಳೆಯಲ್ಲಿ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಂತರ ತೋಟಗಾರಿಕೆ ಇಲಾಖಾ ಉಪನಿರ್ದೇಶಕ ಜೆ. ಗುಣವಂತ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಉತ್ತಮ ಇಳುವರಿ ಪಡೆಯುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ತೋಟಗಾರಿಕಾ ಇಲಾಖೆಯ ವತಿಯಿಂದ ದೊರಕುವ ಎಲ್ಲಾ ಸವಲತ್ತುಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಹಿರಿಯ ವಿಜ್ಞಾನಿ ಡಾ. ಬಿ.ಜಿ. ಹನುಮಂತರಾಯರ ಅವರು ಟೊಮೆಟೊ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಡಾ. ವೀರನಾಗಪ್ಪ, ಪಿ.ರವರು ಟೊಮೆಟೊ ಬೆಳೆಯ ಪೋಷಕಾಂಶ ನಿರ್ವಹಣೆ ಬಗ್ಗೆ ವಿವರಿಸಿದರು. ಡಾ. ದರ್ಶಿನಿ, ಜಿ.ಎಂ., ವಿಜ್ಞಾನಿ (ಸಸ್ಯ ಸಂರಕ್ಷಣೆ),ರವರು ಟೊಮೆಟೊ ಬೆಳೆಯಲ್ಲಿ ಕಂಡು ಬರುವ ಕೀಟ ಮತ್ತು ರೋಗ ಲಕ್ಷಣಗಳನ್ನು ಗುರುತಿಸುವಿಕೆ ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಪ್ರಸ್ತುತ ಟೊಮೆಟೊ ಬೆಳೆಯನ್ನು ಹೆಚ್ಚಾಗಿ ಬಾಧಿಸುತ್ತಿರುವ ಎಲೆಮುಟುರು ನಂಜುರೋಗ ಮತ್ತು ಬಿಳಿನೊಣ ಬಾಧೆಯನ್ನು ತಡೆಗಟ್ಟಲು ಅನುಸರಿಸಬೇಕಾದ ಸಮಗ್ರ ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ವಿವರಿಸಲಾಯಿತು.

ತರಬೇತಿಯಲ್ಲಿ ಟೊಮೆಟೊ ಬೆಳೆಯಲ್ಲಿ ಕಂಡು ಬರುವ ವಿವಿಧ ಕೀಟ ಮತ್ತು ರೋಗ ಬಾಧಿತ ಮಾದರಿಯನ್ನು ಪ್ರದರ್ಶಿಸಲಾಯಿತು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

38 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

16 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago