ಟೊಮ್ಯಾಟೋ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ

2024ನೇ ಸಾಲಿನ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಿದೆ. ಇದಕ್ಕಾಗಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ(AIC) ರವರನ್ನು ಆಯ್ಕೆ ಮಾಡಿರುತ್ತಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಟೊಮ್ಯಾಟೋ ಬೆಳೆಯನ್ನು ಹೋಬಳಿವಾರು ಬೆಳೆ ವಿಮೆ ಯೋಜನೆಗೆ ಒಳಪಡಿಸಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿ ಕುಂದಾಣ ಮತ್ತು ವಿಜಯಪುರ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಸಬಾ ಮತ್ತು ತೂಬಗೆರೆ, ಹೊಸಕೋಟೆ ತಾಲ್ಲೂಕಿನಲ್ಲಿ ಅನುಗೊಂಡನಹಳ್ಳಿ, ಜಡಿಗೇನಹಳ್ಳಿ ಮತ್ತು ನಂದಗುಡಿ, ನೆಲಮಂಗಲ ತಾಲ್ಲೂಕಿನಲ್ಲಿ ಕಸಬಾ ಈ ಹೋಬಳಿಗಳಲ್ಲಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಬಹುದಾಗಿರುತ್ತದೆ.

ಈ ಯೋಜನೆಯಲ್ಲಿ ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ವಿಮಾ ಕಂತಿನ ವಿವರಗಳು: ಟೊಮ್ಯಾಟೊ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 1,41,500
ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ(5%) ರೂ.ಗಳಲ್ಲಿ-7075
ವಿಮಾ ಕಂತು ನೊಂದಾಯಿಸಿಕೊಳ್ಳಲು ಕೊನೆಯ ದಿನ 2024ರ ಜುಲೈ 15 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಈ ಕೆಳಕಂಡ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು. ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಮಲ್ಲಿಕಾರ್ಜುನ ಬಾಬು- (ಮೊ) 9480461234, ತಾಂತ್ರಿಕ ಸಹಾಯಕ ಉಮಾಪತಿ ಹೆಚ್.ಜಿ 9606117615., ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- ದೀಪಾ ಎಂ. ಎಸ್.- 9880210892, ತಾಂತ್ರಿಕ ಸಹಾಯಕರು ಜ್ಯೋತಿ-9535412975. ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರೇಖಾ.ಬಿ.ಪಿ, (ಮೊ)8217210320, ತಾಂತ್ರಿಕ ಸಹಾಯಕ ಸೋಮಶೇಖರ್. -8453966868., ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹರೀಶ್ ಆರ್. (ಮೊ)9880461607, ತಾಂತ್ರಿಕ ಸಹಾಯಕ ವಿಜಯಕುಮಾರ್ -9902581832. ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

2 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

5 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

17 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

19 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

20 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 day ago