ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳಿಂದ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿ ಹಾದುಹೋಗಿರುವ ನಗರದ ಡಿ.ಕ್ರಾಸ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವನಾಯಕ್,  ಟೋಲ್‌ ನಿರ್ವಾಹಕರು ರಸ್ತೆ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದೇ ಈ ರಸ್ತೆಯಲ್ಲಿ ಸಂಚರಿಸುವ ಹಲವು ಮಂದಿ ವಾಹನಸವಾರರು ಹಾಗೂ ಪಾದಚಾರಿಗಳು ಸಾವು-ನೋವುಗಳನ್ನು ಅನುಭವಿಸುತ್ತಿದ್ದಾರೆ. ಅವೈಜ್ಞಾನಿಕವಾಗಿ ಡಿವೈಡರ್‌ ಮತ್ತು ಯು-ಟರ್ನ್‌ಗಳನ್ನು ಅಳವಡಿಸಿದ್ದು, ಪಾದಚಾರಿ ಮಾರ್ಗದ ಮೇಲೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶನೀಡಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದರು.

ರಸ್ತೆಗಾಗಿ ಭೂಮಿ ನೀಡಿದ ರೈತರಿಗೆ ಐದು ವರ್ಷಕಳೆದರೂ ಸೂಕ್ತಪರಿಹಾರ ನೀಡಿಲ್ಲ. ಟೋಲ್‌ ಸಮೀಪದಲ್ಲಿ ಶೌಚಾಲಯ, ವಿದ್ಯುತ್‌ದೀಪ, ಸ್ವಚ್ಛತೆ ಸೇರಿ ಮೂಲಸೌಕರ್ಯಗಳನ್ನು ಕಲ್ಪಿಸಿಲ್ಲ. ಅಪಘಾತಗಳಾದಾಗ ಗಾಯಾಳುಗಳನ್ನು ಸಾಗಿಸಲು ಆಂಬುಲೆನ್ಸ್‌ ಮತ್ತು ಟೋಯಿಂಗ್‌ ವಾಹನದ ಸೌಲಭ್ಯಗಳಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ ನಂತರವಷ್ಟೇ ಟೋಲ್‌ ಸಂಗ್ರಹ ಮಡಬೇಕೆಂದು ಹಲವು ಬಾರಿ ಸೂಚಿಸಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸದೆ ಟೋಲ್‌ ಸಂಗ್ರಹ ಮಾಡಬಾರದು ಎಂದು ಆಗ್ರಹಿಸಿದರು.

ಜನರಿಂದ ತೆರಿಗೆ ವಸೂಲಿ ಮಾಡಿ ಸಾರ್ವಜನಿಕರಿಗೆ ವೈಜ್ಞಾನಿಕವಾಗಿ ರಸ್ತೆ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಇದನ್ನು ಪರಿಗಣಿಸದೆ ಯಾವುದೋ ಖಾಸಗಿ ಸಂಸ್ಥೆ ರಸ್ತೆ ನಿರ್ಮಾಣ ಮಾಡಿ ಸುಂಕ ವಸೂಲಿ ಮಾಡಲು ಬಿಟ್ಟು ನಮಗೂ ರಸ್ತೆಗೂ, ಸಾರ್ವಜನಿಕರ ಜೀವಕ್ಕೂ ಗೌರವ ಇಲ್ಲದಂತೆ ಸರ್ಕಾರಗಳು ಮರೆತು ಬಿಟ್ಟಿದೆ. ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಗರದಲ್ಲಿ ಕೈಗಾರಿಕೆಗಳಿಂದ ಜನಸಂಖ್ಯೆಯು ಹೆಚ್ಚಾಗುತ್ತಿರುವ ಕಾರಣ ವಾಹನಗಳ ದಟ್ಟಣೆ ಹೆಚ್ಚುತ್ತಿದೆ. ಇಲ್ಲಿ ಅವೈಜ್ಞಾನಿಕವಾಗಿ ಸಾರ್ವಜನಿಕರಿಂದ ಸುಂಕ ವಸೂಲಿ ಮಾಡಿ ತಮ್ಮ ಆದಾಯ ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಒಂದು ವಾರಕ್ಕೆ ಕನಿಷ್ಠ ಒಂದೆರಡು ಅಪಘಾತಗಳಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರ ಹಕ್ಕೋತ್ತಾಯಗಳು:

1. ಸುಂಕ ಪಡೆಯುವ ರಸ್ತೆಗೆ ಸರ್ವಿಸ್ ರಸ್ತೆ ನಿರ್ಮಿಸಬೇಕು.

2. ರಸ್ತೆಯ ಮಧ್ಯ ಭಾಗದಲ್ಲಿ ಡಿವೈಡರ್ ಹಾಕಬೇಕು.

3. ಕೆಲವು ಸರ್ಕಲ್‌ಗಳಲ್ಲಿ ಅಂಡರ್ ಪಾಸ್ ಮತ್ತು ಮೇಲು ಸೇತುವೆ ನಿರ್ಮಾಣ ಮಾಡಬೇಕು.

4. ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ವಿಲೇವಾರಿ ಮಾಡುವುದನ್ನು ತಡೆಯುವುದು.

5. ರಸ್ತೆ ಪಕ್ಕದಲ್ಲಿ ಗಿಡಗಂಟಿಗಳು ಬೆಳೆಯದಂತೆ ಸ್ವಚ್ಛ ಮಾಡುವುದು.

6. ರಸ್ತೆ ಪಕ್ಕದಲ್ಲಿ ಖಾಸಗಿ ಜಾಹಿರಾತು ಫಲಕಗಳನ್ನು ಬೇಕಾಬಿಟ್ಟಿ ಹಾಕಿರುವುದನ್ನು ತೆಗೆಯಬೇಕು.

7. ಕೆಲವು ಭಾಗಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಸಬೇಕು.

8. ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯವರು ತಮಗೆ ಸಂಬಂಧಪಟ್ಟ ರಸ್ತೆಗಳ ಬದಿಯಲ್ಲಿರುವ ಕುರುಚಲು ಗಿಡಗಳನ್ನು ತೆಗೆಯುವುದು.

ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನಾ ನಿರತರನ್ನ ರಸ್ತೆಯಿಂದ ತೆರವು ಮಾಡಿ ಟೋಲ್ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುವ ಮೂಲಕ ಪ್ರತಿಭಟನೆ ಅಂತ್ಯಗೊಂಡಿತು.

ಈ ವೇಳೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ಕನ್ನಡ ಪಕ್ಷದ ಉಪಾಧ್ಯಕ್ಷ ಸಂಜೀವನಾಯಕ್, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಕರವೇ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

2 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

5 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

17 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

19 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

22 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

24 hours ago