ಟೋಲ್ ಶುಲ್ಕ ತಪ್ಪಿಸಲು ಅಡ್ಡದಾರಿ ಹುಡುಕಿಕೊಂಡ ಬಿಬಿಎಂಪಿ ಕಸದ ಲಾರಿಗಳು: ತಾಲೂಕಿನ ಕೈಗಾರಿಕಾ ಪ್ರದೇಶದ ವೀರಾಪುರ ಗ್ರಾಮದ ಮಾರ್ಗವಾಗಿ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಸಂಚಾರ: ಕುರುಬರಹಳ್ಳಿ ಸಮೀಪದ ಸ್ಯಾಟಲೈಟ್ ರಿಂಗ್ ರೋಡ್ ಬಳಿ ಲಾರಿಗಳ ತಡೆದು ಪ್ರತಿಭಟಿಸಿದ ಗ್ರಾಮಸ್ಥರು

ಟೋಲ್ ಶುಲ್ಕ ತಪ್ಪಿಸಲು ಬಿಬಿಎಂಪಿ ಕಸದ ಲಾರಿಗಳು ಅಡ್ಡದಾರಿ ಹುಡುಕಿಕೊಂಡಿವೆ. ತಾಲೂಕಿನ ಕೈಗಾರಿಕಾ ಪ್ರದೇಶದ ವೀರಾಪುರ ಗ್ರಾಮದ ಮಾರ್ಗವಾಗಿ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ದಿನನಿತ್ಯ ಸುಮಾರು 40-50 ಕಸದ ಲಾರಿಗಳು ಸಂಚಾರ ಮಾಡುತ್ತಿವೆ. ರಸ್ತೆ ಹಾಗೂ ಜನರ ಸುರಕ್ಷತೆ ದೃಷ್ಟಿಯಿಂದ ನಗರಸಭೆ ಸದಸ್ಯ ಬಂತಿ ವೆಂಕಟೇಶ್ ನೇತೃತ್ವದಲ್ಲಿಂದು ತಾಲೂಕಿನ ಕುರುಬರಹಳ್ಳಿ ಸಮೀಪದ ಸ್ಯಾಟಲೈಟ್ ರಿಂಗ್ ರೋಡ್ ಬಳಿ ಸುಮಾರು 9ಕಸದ ಲಾರಿಗಳನ್ನು ತಡೆದು ಲಾರಿ ಚಾಲಕರನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಎಲ್ಲಾ ಲಾರಿಗಳನ್ನು ಕೂಡಲೇ ವಶಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಪೊಲೀಸ್ ಇಲಾಖೆಗೆ ಮನವಿ ಮಾಡಲಾಯಿತು.

ಈ ವೇಳೆ ಮಾಧ್ಯಮದವರೊಂದಿಗೆ ನಗರಸಭೆ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ಕೈಗಾರಿಕಾ ಪ್ರದೇಶದ ವೀರಾಪುರ ಗ್ರಾಮದ ಮಾರ್ಗವಾಗಿ ಬಿಬಿಎಂಪಿ ಕಸ ತುಂಬಿದ ಲಾರಿಗಳ ಸಂಚಾರ ಮಿತಿ ಮೀರಿದೆ. ಅಪಘಾತ ನಡೆಯುವ ಮುನ್ನ ಲಾರಿಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು. ಇಲ್ಲವಾದರೆ ರಸ್ತೆ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನ ನೂರಾರು ಲಾರಿಗಳು ಬಿಬಿಎಂಪಿ ವ್ಯಾಪ್ತಿಯಿಂದ ಕಸ ತುಂಬಿಕೊಂಡು ಬರುತ್ತಿವೆ. ಕಸ ತುಂಬಿದ ಲಾರಿಗಳು ಇಷ್ಟು ವರ್ಷಗಳಿಂದಲೂ -ದಾಬಸ್‌ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಬರುತ್ತಿದ್ದವು. ಆದರೆ, ಹುಲಿಕುಂಟೆ ಸಮೀಪ ಟೋಲ್ ಪ್ರಾರಂಭವಾದ ನಂತರ ಟೋಲ್ ಶುಲ್ಕ ತಪ್ಪಿಸಿಕೊಳ್ಳಲು ಈಗ ದೊಡಬಳ್ಳಾಪುರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮೂಲಕ ಸಂಚರಿಸುತ್ತಿವೆ ಎಂದರು.

ಗ್ರಾಮಗಳ ಮೂಲಕ ಕಸ ತುಂಬಿದ ಲಾರಿಗಳು ಹೋಗುವಾಗ ಬರುತ್ತಿರುವ ದುರ್ನಾತ ಹಾಗೂ ರಸ್ತೆಯುದ್ದಕ್ಕೂ ಲಾರಿಯಿಂದ ಸೋರುತ್ತಿರುವ ತ್ಯಾಜ್ಯ ನೀರಿನಿಂದ ಗ್ರಾಮಸ್ಥರು ಮೂಗುಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಟೋಲ್ ಶುಲ್ಕ ಉಳಿಸುವ ನೆಪದಲ್ಲಿಸ ಕಸದ ಲಾರಿಗಳು ಮಿತಿ ಮೀರಿದ ವೇಗದಲ್ಲಿ ಸಂಚರಿಸುತ್ತಿವೆ. ಕಸದ ಲಾರಿಗಳು ಈಗಾಗಲೇ ಬೆಂಗಳೂರು ನಗರ ಸೇರಿದಂತೆ ಇತರೆಡೆ ಅಪಘಾತ ನಡೆಸಿ ಹತ್ತಾರು ಜನರ ಜೀವ ತೆಗೆದಿರುವ ಕುಖ್ಯಾತಿ ಪಡೆದಿವೆ. ಇಂತಹ ಲಾರಿಗಳಿಂದ ನಮ್ಮೂರಿನ ಭಾಗದಲ್ಲೂ ಅನಾಹುತ ಸಂಭವಿಸುವ ಮುನ್ನ ಕಸದ ಲಾರಿಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

 

ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕ ಬಂದ್ ಮಾಡುವಂತೆ ಶಾಸಕ ಧೀರಜ್ ಮುನಿರಾಜ್ ಅವರು ಸದನದಲ್ಲಿ ಹಲವಾರು ಧ್ವನಿ ಎತ್ತಿದ್ದಾರೆ. ಎಂಎಸ್‌ಜಿಪಿ ಕಸ ವಿಲೇವಾರಿ ಘಟಕವಿರುವ ಸುತ್ತಾಮುತ್ತ ಹಳ್ಳಿಗಳ ಜನರು ಉತ್ತಮ ಗುಣಮಟ್ಟದ ಜೀವನ ನಡೆಸಲು ಸಾಧ್ಯವಾಗದೇ ಊರು ಬಿಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ನಮ್ಮ ದೊಡ್ಡಬಳ್ಳಾಪುರ ಮಾರ್ಗವಾಗಿ ಕಸದ ಲಾರಿಗಳು ಸಂಚರಿಸಿ ಉಳಿದವರ ಪ್ರಾಣಕ್ಕೂ ಕುತ್ತುತರವು ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಸ್ಥಳಕ್ಕೆ ಆರ್ ಟಿಒ ಅಧಿಕಾರಿಗಳು ದೌಡಾಯಿಸಿ ಲಾರಿಗಳ ದಾಖಲೆಗಳನ್ನು ಪರಿಶೀಲಿಸಿದರು. ಕೆಲ ಲಾರಿಗಳಿಗೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ದೊಡ್ಡಬೆಳವಂಗಲ ಠಾಣೆಗೆ ವಹಿಸಲಾಯಿತು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

7 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

11 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

19 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

22 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

1 day ago