ಟೋಲ್ ಶುಲ್ಕ ತಪ್ಪಿಸಲು ಬಿಬಿಎಂಪಿ ಕಸದ ಲಾರಿಗಳು ಅಡ್ಡದಾರಿ ಹುಡುಕಿಕೊಂಡಿವೆ. ತಾಲೂಕಿನ ಕೈಗಾರಿಕಾ ಪ್ರದೇಶದ ವೀರಾಪುರ ಗ್ರಾಮದ ಮಾರ್ಗವಾಗಿ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ದಿನನಿತ್ಯ ಸುಮಾರು 40-50 ಕಸದ ಲಾರಿಗಳು ಸಂಚಾರ ಮಾಡುತ್ತಿವೆ. ರಸ್ತೆ ಹಾಗೂ ಜನರ ಸುರಕ್ಷತೆ ದೃಷ್ಟಿಯಿಂದ ನಗರಸಭೆ ಸದಸ್ಯ ಬಂತಿ ವೆಂಕಟೇಶ್ ನೇತೃತ್ವದಲ್ಲಿಂದು ತಾಲೂಕಿನ ಕುರುಬರಹಳ್ಳಿ ಸಮೀಪದ ಸ್ಯಾಟಲೈಟ್ ರಿಂಗ್ ರೋಡ್ ಬಳಿ ಸುಮಾರು 9ಕಸದ ಲಾರಿಗಳನ್ನು ತಡೆದು ಲಾರಿ ಚಾಲಕರನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಎಲ್ಲಾ ಲಾರಿಗಳನ್ನು ಕೂಡಲೇ ವಶಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಪೊಲೀಸ್ ಇಲಾಖೆಗೆ ಮನವಿ ಮಾಡಲಾಯಿತು.
ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನ ನೂರಾರು ಲಾರಿಗಳು ಬಿಬಿಎಂಪಿ ವ್ಯಾಪ್ತಿಯಿಂದ ಕಸ ತುಂಬಿಕೊಂಡು ಬರುತ್ತಿವೆ. ಕಸ ತುಂಬಿದ ಲಾರಿಗಳು ಇಷ್ಟು ವರ್ಷಗಳಿಂದಲೂ -ದಾಬಸ್ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಬರುತ್ತಿದ್ದವು. ಆದರೆ, ಹುಲಿಕುಂಟೆ ಸಮೀಪ ಟೋಲ್ ಪ್ರಾರಂಭವಾದ ನಂತರ ಟೋಲ್ ಶುಲ್ಕ ತಪ್ಪಿಸಿಕೊಳ್ಳಲು ಈಗ ದೊಡಬಳ್ಳಾಪುರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮೂಲಕ ಸಂಚರಿಸುತ್ತಿವೆ ಎಂದರು.
ಗ್ರಾಮಗಳ ಮೂಲಕ ಕಸ ತುಂಬಿದ ಲಾರಿಗಳು ಹೋಗುವಾಗ ಬರುತ್ತಿರುವ ದುರ್ನಾತ ಹಾಗೂ ರಸ್ತೆಯುದ್ದಕ್ಕೂ ಲಾರಿಯಿಂದ ಸೋರುತ್ತಿರುವ ತ್ಯಾಜ್ಯ ನೀರಿನಿಂದ ಗ್ರಾಮಸ್ಥರು ಮೂಗುಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಟೋಲ್ ಶುಲ್ಕ ಉಳಿಸುವ ನೆಪದಲ್ಲಿಸ ಕಸದ ಲಾರಿಗಳು ಮಿತಿ ಮೀರಿದ ವೇಗದಲ್ಲಿ ಸಂಚರಿಸುತ್ತಿವೆ. ಕಸದ ಲಾರಿಗಳು ಈಗಾಗಲೇ ಬೆಂಗಳೂರು ನಗರ ಸೇರಿದಂತೆ ಇತರೆಡೆ ಅಪಘಾತ ನಡೆಸಿ ಹತ್ತಾರು ಜನರ ಜೀವ ತೆಗೆದಿರುವ ಕುಖ್ಯಾತಿ ಪಡೆದಿವೆ. ಇಂತಹ ಲಾರಿಗಳಿಂದ ನಮ್ಮೂರಿನ ಭಾಗದಲ್ಲೂ ಅನಾಹುತ ಸಂಭವಿಸುವ ಮುನ್ನ ಕಸದ ಲಾರಿಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕ ಬಂದ್ ಮಾಡುವಂತೆ ಶಾಸಕ ಧೀರಜ್ ಮುನಿರಾಜ್ ಅವರು ಸದನದಲ್ಲಿ ಹಲವಾರು ಧ್ವನಿ ಎತ್ತಿದ್ದಾರೆ. ಎಂಎಸ್ಜಿಪಿ ಕಸ ವಿಲೇವಾರಿ ಘಟಕವಿರುವ ಸುತ್ತಾಮುತ್ತ ಹಳ್ಳಿಗಳ ಜನರು ಉತ್ತಮ ಗುಣಮಟ್ಟದ ಜೀವನ ನಡೆಸಲು ಸಾಧ್ಯವಾಗದೇ ಊರು ಬಿಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ನಮ್ಮ ದೊಡ್ಡಬಳ್ಳಾಪುರ ಮಾರ್ಗವಾಗಿ ಕಸದ ಲಾರಿಗಳು ಸಂಚರಿಸಿ ಉಳಿದವರ ಪ್ರಾಣಕ್ಕೂ ಕುತ್ತುತರವು ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸ್ಥಳಕ್ಕೆ ಆರ್ ಟಿಒ ಅಧಿಕಾರಿಗಳು ದೌಡಾಯಿಸಿ ಲಾರಿಗಳ ದಾಖಲೆಗಳನ್ನು ಪರಿಶೀಲಿಸಿದರು. ಕೆಲ ಲಾರಿಗಳಿಗೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ದೊಡ್ಡಬೆಳವಂಗಲ ಠಾಣೆಗೆ ವಹಿಸಲಾಯಿತು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…