ಟೋಲ್ ಶುಲ್ಕ ತಪ್ಪಿಸಲು ಬಿಬಿಎಂಪಿ ಕಸದ ಲಾರಿಗಳು ಅಡ್ಡದಾರಿ ಹುಡುಕಿಕೊಂಡಿವೆ. ತಾಲೂಕಿನ ಕೈಗಾರಿಕಾ ಪ್ರದೇಶದ ವೀರಾಪುರ ಗ್ರಾಮದ ಮಾರ್ಗವಾಗಿ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ದಿನನಿತ್ಯ ಸುಮಾರು 40-50 ಕಸದ ಲಾರಿಗಳು ಸಂಚಾರ ಮಾಡುತ್ತಿವೆ. ರಸ್ತೆ ಹಾಗೂ ಜನರ ಸುರಕ್ಷತೆ ದೃಷ್ಟಿಯಿಂದ ನಗರಸಭೆ ಸದಸ್ಯ ಬಂತಿ ವೆಂಕಟೇಶ್ ನೇತೃತ್ವದಲ್ಲಿಂದು ತಾಲೂಕಿನ ಕುರುಬರಹಳ್ಳಿ ಸಮೀಪದ ಸ್ಯಾಟಲೈಟ್ ರಿಂಗ್ ರೋಡ್ ಬಳಿ ಸುಮಾರು 9ಕಸದ ಲಾರಿಗಳನ್ನು ತಡೆದು ಲಾರಿ ಚಾಲಕರನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಎಲ್ಲಾ ಲಾರಿಗಳನ್ನು ಕೂಡಲೇ ವಶಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಪೊಲೀಸ್ ಇಲಾಖೆಗೆ ಮನವಿ ಮಾಡಲಾಯಿತು.
ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನ ನೂರಾರು ಲಾರಿಗಳು ಬಿಬಿಎಂಪಿ ವ್ಯಾಪ್ತಿಯಿಂದ ಕಸ ತುಂಬಿಕೊಂಡು ಬರುತ್ತಿವೆ. ಕಸ ತುಂಬಿದ ಲಾರಿಗಳು ಇಷ್ಟು ವರ್ಷಗಳಿಂದಲೂ -ದಾಬಸ್ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಬರುತ್ತಿದ್ದವು. ಆದರೆ, ಹುಲಿಕುಂಟೆ ಸಮೀಪ ಟೋಲ್ ಪ್ರಾರಂಭವಾದ ನಂತರ ಟೋಲ್ ಶುಲ್ಕ ತಪ್ಪಿಸಿಕೊಳ್ಳಲು ಈಗ ದೊಡಬಳ್ಳಾಪುರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮೂಲಕ ಸಂಚರಿಸುತ್ತಿವೆ ಎಂದರು.
ಗ್ರಾಮಗಳ ಮೂಲಕ ಕಸ ತುಂಬಿದ ಲಾರಿಗಳು ಹೋಗುವಾಗ ಬರುತ್ತಿರುವ ದುರ್ನಾತ ಹಾಗೂ ರಸ್ತೆಯುದ್ದಕ್ಕೂ ಲಾರಿಯಿಂದ ಸೋರುತ್ತಿರುವ ತ್ಯಾಜ್ಯ ನೀರಿನಿಂದ ಗ್ರಾಮಸ್ಥರು ಮೂಗುಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಟೋಲ್ ಶುಲ್ಕ ಉಳಿಸುವ ನೆಪದಲ್ಲಿಸ ಕಸದ ಲಾರಿಗಳು ಮಿತಿ ಮೀರಿದ ವೇಗದಲ್ಲಿ ಸಂಚರಿಸುತ್ತಿವೆ. ಕಸದ ಲಾರಿಗಳು ಈಗಾಗಲೇ ಬೆಂಗಳೂರು ನಗರ ಸೇರಿದಂತೆ ಇತರೆಡೆ ಅಪಘಾತ ನಡೆಸಿ ಹತ್ತಾರು ಜನರ ಜೀವ ತೆಗೆದಿರುವ ಕುಖ್ಯಾತಿ ಪಡೆದಿವೆ. ಇಂತಹ ಲಾರಿಗಳಿಂದ ನಮ್ಮೂರಿನ ಭಾಗದಲ್ಲೂ ಅನಾಹುತ ಸಂಭವಿಸುವ ಮುನ್ನ ಕಸದ ಲಾರಿಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕ ಬಂದ್ ಮಾಡುವಂತೆ ಶಾಸಕ ಧೀರಜ್ ಮುನಿರಾಜ್ ಅವರು ಸದನದಲ್ಲಿ ಹಲವಾರು ಧ್ವನಿ ಎತ್ತಿದ್ದಾರೆ. ಎಂಎಸ್ಜಿಪಿ ಕಸ ವಿಲೇವಾರಿ ಘಟಕವಿರುವ ಸುತ್ತಾಮುತ್ತ ಹಳ್ಳಿಗಳ ಜನರು ಉತ್ತಮ ಗುಣಮಟ್ಟದ ಜೀವನ ನಡೆಸಲು ಸಾಧ್ಯವಾಗದೇ ಊರು ಬಿಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ನಮ್ಮ ದೊಡ್ಡಬಳ್ಳಾಪುರ ಮಾರ್ಗವಾಗಿ ಕಸದ ಲಾರಿಗಳು ಸಂಚರಿಸಿ ಉಳಿದವರ ಪ್ರಾಣಕ್ಕೂ ಕುತ್ತುತರವು ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸ್ಥಳಕ್ಕೆ ಆರ್ ಟಿಒ ಅಧಿಕಾರಿಗಳು ದೌಡಾಯಿಸಿ ಲಾರಿಗಳ ದಾಖಲೆಗಳನ್ನು ಪರಿಶೀಲಿಸಿದರು. ಕೆಲ ಲಾರಿಗಳಿಗೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ದೊಡ್ಡಬೆಳವಂಗಲ ಠಾಣೆಗೆ ವಹಿಸಲಾಯಿತು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…