ಟೌನ್ ಆಯ್ತು ಈಗ ಗ್ರಾಮೀಣ ಭಾಗಕ್ಕೆ ಲಗ್ಗೆ ಇಟ್ಟ ಅಂಗಡಿ ಕಳ್ಳರು: ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ

ಇತ್ತೀಚೆಗೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂಗಡಿ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಶುಕ್ರವಾರ ರಾತ್ರಯಷ್ಟೇ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ನಡೆದಿತ್ತು. ಇದೀಗ ತೂಬಗೆರೆ ಗ್ರಾಮದ ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ ಕಂಡುಬಂದಿದೆ.

ಅಕ್ಕಪಕ್ಕದಲ್ಲೇ ಇದ್ದ ಎರಡು ದಿನಸಿ ಅಂಗಡಿಗಳಲ್ಲಿ ಒಂದು ಅಂಗಡಿಯ ಶಟರ್ ಮುರಿದು ಒಳ ಹೋಗಿ ನಗದು, ಇತರೆ ವಸ್ತುಗಳನ್ನು ದೋಚಿದ್ದಾರೆ. ನಂತರ ಮತ್ತೊಂದು ಅಂಗಡಿಯ ಶಟರ್ ಲಾಕ್ ಮುರಿದು ಒಳ ಹೋಗಲು ಯತ್ನಿಸಿದ್ದಾರೆ ಎಂಬ ಮಾಹಿತಿ ಒದಗಿಬಂದಿದೆ.

ಅದೇರೀತಿ ತೂಬಗೆರೆ ಕೂಗಳತೆ ದೂರದ ಹಾಡೋನಹಳ್ಳಿಯಲ್ಲಿ ರೈತರ ಎರಡು ಮೇಕೆಗಳು ಸಹ ಕಳ್ಳತನವಾಗಿದೆ.

ಈ ಎರಡು ಘಟನೆಗಳು ಕಳೆದ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿವೆ….

ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಅಂಗಡಿ ಮಾಲೀಕರು, ವ್ಯಾಪಾರಿಗಳು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

1 hour ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

15 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

16 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

18 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago