ಟೌನ್ ಆಯ್ತು ಈಗ ಗ್ರಾಮೀಣ ಭಾಗಕ್ಕೆ ಲಗ್ಗೆ ಇಟ್ಟ ಅಂಗಡಿ ಕಳ್ಳರು: ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ

ಇತ್ತೀಚೆಗೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂಗಡಿ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಶುಕ್ರವಾರ ರಾತ್ರಯಷ್ಟೇ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ನಡೆದಿತ್ತು. ಇದೀಗ ತೂಬಗೆರೆ ಗ್ರಾಮದ ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ ಕಂಡುಬಂದಿದೆ.

ಅಕ್ಕಪಕ್ಕದಲ್ಲೇ ಇದ್ದ ಎರಡು ದಿನಸಿ ಅಂಗಡಿಗಳಲ್ಲಿ ಒಂದು ಅಂಗಡಿಯ ಶಟರ್ ಮುರಿದು ಒಳ ಹೋಗಿ ನಗದು, ಇತರೆ ವಸ್ತುಗಳನ್ನು ದೋಚಿದ್ದಾರೆ. ನಂತರ ಮತ್ತೊಂದು ಅಂಗಡಿಯ ಶಟರ್ ಲಾಕ್ ಮುರಿದು ಒಳ ಹೋಗಲು ಯತ್ನಿಸಿದ್ದಾರೆ ಎಂಬ ಮಾಹಿತಿ ಒದಗಿಬಂದಿದೆ.

ಅದೇರೀತಿ ತೂಬಗೆರೆ ಕೂಗಳತೆ ದೂರದ ಹಾಡೋನಹಳ್ಳಿಯಲ್ಲಿ ರೈತರ ಎರಡು ಮೇಕೆಗಳು ಸಹ ಕಳ್ಳತನವಾಗಿದೆ.

ಈ ಎರಡು ಘಟನೆಗಳು ಕಳೆದ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿವೆ….

ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಅಂಗಡಿ ಮಾಲೀಕರು, ವ್ಯಾಪಾರಿಗಳು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

7 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

17 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago