ಟೌನ್ ಆಯ್ತು ಈಗ ಗ್ರಾಮೀಣ ಭಾಗಕ್ಕೆ ಲಗ್ಗೆ ಇಟ್ಟ ಅಂಗಡಿ ಕಳ್ಳರು: ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ

ಇತ್ತೀಚೆಗೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂಗಡಿ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಶುಕ್ರವಾರ ರಾತ್ರಯಷ್ಟೇ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ನಡೆದಿತ್ತು. ಇದೀಗ ತೂಬಗೆರೆ ಗ್ರಾಮದ ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ ಕಂಡುಬಂದಿದೆ.

ಅಕ್ಕಪಕ್ಕದಲ್ಲೇ ಇದ್ದ ಎರಡು ದಿನಸಿ ಅಂಗಡಿಗಳಲ್ಲಿ ಒಂದು ಅಂಗಡಿಯ ಶಟರ್ ಮುರಿದು ಒಳ ಹೋಗಿ ನಗದು, ಇತರೆ ವಸ್ತುಗಳನ್ನು ದೋಚಿದ್ದಾರೆ. ನಂತರ ಮತ್ತೊಂದು ಅಂಗಡಿಯ ಶಟರ್ ಲಾಕ್ ಮುರಿದು ಒಳ ಹೋಗಲು ಯತ್ನಿಸಿದ್ದಾರೆ ಎಂಬ ಮಾಹಿತಿ ಒದಗಿಬಂದಿದೆ.

ಅದೇರೀತಿ ತೂಬಗೆರೆ ಕೂಗಳತೆ ದೂರದ ಹಾಡೋನಹಳ್ಳಿಯಲ್ಲಿ ರೈತರ ಎರಡು ಮೇಕೆಗಳು ಸಹ ಕಳ್ಳತನವಾಗಿದೆ.

ಈ ಎರಡು ಘಟನೆಗಳು ಕಳೆದ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿವೆ….

ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಅಂಗಡಿ ಮಾಲೀಕರು, ವ್ಯಾಪಾರಿಗಳು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

17 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

18 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

23 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 days ago