ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತಲು ಟೌನ್ ಶಿಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿರುವ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಬೆಂಗಳೂರಿನಲ್ಲಿ ವಸತಿಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜಧಾನಿಯ ಸುತ್ತಲಿನ ತಾಲ್ಲೂಕುಗಳಲ್ಲಿ ಹೈಟೆಕ್ ಸೌಲಭ್ಯಗಳನ್ನು ಒಳಗೊಂಡ ಟೌನ್ಶಿಪ್ ಗಳನ್ನು ನಿರ್ಮಿಸುವ ಸರ್ಕಾರದ ಯೋಜನೆಯ ಭಾಗವಾಗಿ ಕಸಬಾ ಹೋಬಳಿಯ ರಾಜಘಟ್ಟ, ತಿಮ್ಮಸಂದ್ರ ಗ್ರಾಮ, ಹಾಗೆಯೇ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ಸಮೀಪ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದರು.
ಈ ಹಿಂದಿನ ಸರ್ಕಾರದಲ್ಲಿ ಬೆಂಗಳೂರು ಸುತ್ತಲಿನ ತಾಲ್ಲೂಕುಗಳನ್ನು ಹಾದುಹೋಗುವಂತೆ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಲನಕ್ಷೆ ಗುರುತಿಸಲಾಗಿತ್ತು. ಈ ರಿಂಗ್ ರಸ್ತೆಯು ರಾಮನಗರ ಜಿಲ್ಲೆಯ ಸಾತನೂರು ಸಮೀಪದಿಂದ ಪ್ರಾರಂಭವಾಗಿ ಬಿಡದಿ, ಮಾಗಡಿ, ಸೋಲೂರು, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಂದಗುಡಿ, ಆನೇಕಲ್ ತಾಲ್ಲೂಕಿನ ಮೂಲಕ ಮತ್ತೆ ಸಾತನೂರು ಸೇರಲಿದೆ ಎಂದರು.
ರಿಂಗ್ ರಸ್ತೆ ನಿರ್ಮಾಣದಿಂದ ಅಂತರ ರಾಜ್ಯಗಳ ಹೆದ್ದಾರಿ, ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ. ನೂತನ ಟೌನ್ ಶಿಪ್ ಗಳನ್ನು ಸಹ ರಿಂಗ್ ರಸ್ತೆಗೆ ಸಮೀಪದಲ್ಲೇ ನಿರ್ಮಿಸುವ ಉದ್ದೇಶದೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಯಾವುದನ್ನು ಇನ್ನು ಅಂತಿಮಗೊಳಿಸಿಲ್ಲ. ಟೌನ್ ಶಿಪ್ ನಿರ್ಮಾಣದ ಸಾಧ್ಯತೆ, ಅನುಕೂಲಗಳ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…