ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತಲು ಟೌನ್ ಶಿಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿರುವ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಬೆಂಗಳೂರಿನಲ್ಲಿ ವಸತಿಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜಧಾನಿಯ ಸುತ್ತಲಿನ ತಾಲ್ಲೂಕುಗಳಲ್ಲಿ ಹೈಟೆಕ್ ಸೌಲಭ್ಯಗಳನ್ನು ಒಳಗೊಂಡ ಟೌನ್ಶಿಪ್ ಗಳನ್ನು ನಿರ್ಮಿಸುವ ಸರ್ಕಾರದ ಯೋಜನೆಯ ಭಾಗವಾಗಿ ಕಸಬಾ ಹೋಬಳಿಯ ರಾಜಘಟ್ಟ, ತಿಮ್ಮಸಂದ್ರ ಗ್ರಾಮ, ಹಾಗೆಯೇ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ಸಮೀಪ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದರು.
ಈ ಹಿಂದಿನ ಸರ್ಕಾರದಲ್ಲಿ ಬೆಂಗಳೂರು ಸುತ್ತಲಿನ ತಾಲ್ಲೂಕುಗಳನ್ನು ಹಾದುಹೋಗುವಂತೆ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಲನಕ್ಷೆ ಗುರುತಿಸಲಾಗಿತ್ತು. ಈ ರಿಂಗ್ ರಸ್ತೆಯು ರಾಮನಗರ ಜಿಲ್ಲೆಯ ಸಾತನೂರು ಸಮೀಪದಿಂದ ಪ್ರಾರಂಭವಾಗಿ ಬಿಡದಿ, ಮಾಗಡಿ, ಸೋಲೂರು, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಂದಗುಡಿ, ಆನೇಕಲ್ ತಾಲ್ಲೂಕಿನ ಮೂಲಕ ಮತ್ತೆ ಸಾತನೂರು ಸೇರಲಿದೆ ಎಂದರು.
ರಿಂಗ್ ರಸ್ತೆ ನಿರ್ಮಾಣದಿಂದ ಅಂತರ ರಾಜ್ಯಗಳ ಹೆದ್ದಾರಿ, ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ. ನೂತನ ಟೌನ್ ಶಿಪ್ ಗಳನ್ನು ಸಹ ರಿಂಗ್ ರಸ್ತೆಗೆ ಸಮೀಪದಲ್ಲೇ ನಿರ್ಮಿಸುವ ಉದ್ದೇಶದೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಯಾವುದನ್ನು ಇನ್ನು ಅಂತಿಮಗೊಳಿಸಿಲ್ಲ. ಟೌನ್ ಶಿಪ್ ನಿರ್ಮಾಣದ ಸಾಧ್ಯತೆ, ಅನುಕೂಲಗಳ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…