ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತಲು ಟೌನ್ ಶಿಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿರುವ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಬೆಂಗಳೂರಿನಲ್ಲಿ ವಸತಿಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜಧಾನಿಯ ಸುತ್ತಲಿನ ತಾಲ್ಲೂಕುಗಳಲ್ಲಿ ಹೈಟೆಕ್ ಸೌಲಭ್ಯಗಳನ್ನು ಒಳಗೊಂಡ ಟೌನ್ಶಿಪ್ ಗಳನ್ನು ನಿರ್ಮಿಸುವ ಸರ್ಕಾರದ ಯೋಜನೆಯ ಭಾಗವಾಗಿ ಕಸಬಾ ಹೋಬಳಿಯ ರಾಜಘಟ್ಟ, ತಿಮ್ಮಸಂದ್ರ ಗ್ರಾಮ, ಹಾಗೆಯೇ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ಸಮೀಪ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದರು.
ಈ ಹಿಂದಿನ ಸರ್ಕಾರದಲ್ಲಿ ಬೆಂಗಳೂರು ಸುತ್ತಲಿನ ತಾಲ್ಲೂಕುಗಳನ್ನು ಹಾದುಹೋಗುವಂತೆ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಲನಕ್ಷೆ ಗುರುತಿಸಲಾಗಿತ್ತು. ಈ ರಿಂಗ್ ರಸ್ತೆಯು ರಾಮನಗರ ಜಿಲ್ಲೆಯ ಸಾತನೂರು ಸಮೀಪದಿಂದ ಪ್ರಾರಂಭವಾಗಿ ಬಿಡದಿ, ಮಾಗಡಿ, ಸೋಲೂರು, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಂದಗುಡಿ, ಆನೇಕಲ್ ತಾಲ್ಲೂಕಿನ ಮೂಲಕ ಮತ್ತೆ ಸಾತನೂರು ಸೇರಲಿದೆ ಎಂದರು.
ರಿಂಗ್ ರಸ್ತೆ ನಿರ್ಮಾಣದಿಂದ ಅಂತರ ರಾಜ್ಯಗಳ ಹೆದ್ದಾರಿ, ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ. ನೂತನ ಟೌನ್ ಶಿಪ್ ಗಳನ್ನು ಸಹ ರಿಂಗ್ ರಸ್ತೆಗೆ ಸಮೀಪದಲ್ಲೇ ನಿರ್ಮಿಸುವ ಉದ್ದೇಶದೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಯಾವುದನ್ನು ಇನ್ನು ಅಂತಿಮಗೊಳಿಸಿಲ್ಲ. ಟೌನ್ ಶಿಪ್ ನಿರ್ಮಾಣದ ಸಾಧ್ಯತೆ, ಅನುಕೂಲಗಳ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…