ಟೌನ್ ಶಿಪ್ ಅಭಿವೃದ್ಧಿಪಡಿಸಲು ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲಿಸಿದ ಡಿಸಿಎಂ ಡಿಕೆಶಿ

ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತಲು ಟೌನ್ ಶಿಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿರುವ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಬೆಂಗಳೂರಿನಲ್ಲಿ ವಸತಿಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜಧಾನಿಯ ಸುತ್ತಲಿನ ತಾಲ್ಲೂಕುಗಳಲ್ಲಿ ಹೈಟೆಕ್ ಸೌಲಭ್ಯಗಳನ್ನು ಒಳಗೊಂಡ ಟೌನ್ಶಿಪ್ ಗಳನ್ನು ನಿರ್ಮಿಸುವ ಸರ್ಕಾರದ ಯೋಜನೆಯ ಭಾಗವಾಗಿ ಕಸಬಾ ಹೋಬಳಿಯ ರಾಜಘಟ್ಟ, ತಿಮ್ಮಸಂದ್ರ ಗ್ರಾಮ, ಹಾಗೆಯೇ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ಸಮೀಪ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದರು.

ಈ ಹಿಂದಿನ ಸರ್ಕಾರದಲ್ಲಿ ಬೆಂಗಳೂರು ಸುತ್ತಲಿನ ತಾಲ್ಲೂಕುಗಳನ್ನು ಹಾದುಹೋಗುವಂತೆ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಲನಕ್ಷೆ ಗುರುತಿಸಲಾಗಿತ್ತು. ಈ ರಿಂಗ್ ರಸ್ತೆಯು ರಾಮನಗರ ಜಿಲ್ಲೆಯ ಸಾತನೂರು ಸಮೀಪದಿಂದ ಪ್ರಾರಂಭವಾಗಿ ಬಿಡದಿ, ಮಾಗಡಿ, ಸೋಲೂರು, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಂದಗುಡಿ, ಆನೇಕಲ್ ತಾಲ್ಲೂಕಿನ ಮೂಲಕ ಮತ್ತೆ ಸಾತನೂರು ಸೇರಲಿದೆ ಎಂದರು.

ರಿಂಗ್ ರಸ್ತೆ ನಿರ್ಮಾಣದಿಂದ ಅಂತರ ರಾಜ್ಯಗಳ ಹೆದ್ದಾರಿ, ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ. ನೂತನ ಟೌನ್ ಶಿಪ್ ಗಳನ್ನು ಸಹ ರಿಂಗ್ ರಸ್ತೆಗೆ ಸಮೀಪದಲ್ಲೇ ನಿರ್ಮಿಸುವ ಉದ್ದೇಶದೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಯಾವುದನ್ನು ಇನ್ನು ಅಂತಿಮಗೊಳಿಸಿಲ್ಲ. ಟೌನ್ ಶಿಪ್ ನಿರ್ಮಾಣದ ಸಾಧ್ಯತೆ, ಅನುಕೂಲಗಳ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದರು.

ಸ್ಥಳ ಪರಿಶೀಲನೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

4 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago