ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತಲು ಟೌನ್ ಶಿಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿರುವ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಬೆಂಗಳೂರಿನಲ್ಲಿ ವಸತಿಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜಧಾನಿಯ ಸುತ್ತಲಿನ ತಾಲ್ಲೂಕುಗಳಲ್ಲಿ ಹೈಟೆಕ್ ಸೌಲಭ್ಯಗಳನ್ನು ಒಳಗೊಂಡ ಟೌನ್ಶಿಪ್ ಗಳನ್ನು ನಿರ್ಮಿಸುವ ಸರ್ಕಾರದ ಯೋಜನೆಯ ಭಾಗವಾಗಿ ಕಸಬಾ ಹೋಬಳಿಯ ರಾಜಘಟ್ಟ, ತಿಮ್ಮಸಂದ್ರ ಗ್ರಾಮ, ಹಾಗೆಯೇ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ಸಮೀಪ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದರು.
ಈ ಹಿಂದಿನ ಸರ್ಕಾರದಲ್ಲಿ ಬೆಂಗಳೂರು ಸುತ್ತಲಿನ ತಾಲ್ಲೂಕುಗಳನ್ನು ಹಾದುಹೋಗುವಂತೆ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಲನಕ್ಷೆ ಗುರುತಿಸಲಾಗಿತ್ತು. ಈ ರಿಂಗ್ ರಸ್ತೆಯು ರಾಮನಗರ ಜಿಲ್ಲೆಯ ಸಾತನೂರು ಸಮೀಪದಿಂದ ಪ್ರಾರಂಭವಾಗಿ ಬಿಡದಿ, ಮಾಗಡಿ, ಸೋಲೂರು, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಂದಗುಡಿ, ಆನೇಕಲ್ ತಾಲ್ಲೂಕಿನ ಮೂಲಕ ಮತ್ತೆ ಸಾತನೂರು ಸೇರಲಿದೆ ಎಂದರು.
ರಿಂಗ್ ರಸ್ತೆ ನಿರ್ಮಾಣದಿಂದ ಅಂತರ ರಾಜ್ಯಗಳ ಹೆದ್ದಾರಿ, ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ. ನೂತನ ಟೌನ್ ಶಿಪ್ ಗಳನ್ನು ಸಹ ರಿಂಗ್ ರಸ್ತೆಗೆ ಸಮೀಪದಲ್ಲೇ ನಿರ್ಮಿಸುವ ಉದ್ದೇಶದೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಯಾವುದನ್ನು ಇನ್ನು ಅಂತಿಮಗೊಳಿಸಿಲ್ಲ. ಟೌನ್ ಶಿಪ್ ನಿರ್ಮಾಣದ ಸಾಧ್ಯತೆ, ಅನುಕೂಲಗಳ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…