ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತಲು ಟೌನ್ ಶಿಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿರುವ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಬೆಂಗಳೂರಿನಲ್ಲಿ ವಸತಿಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜಧಾನಿಯ ಸುತ್ತಲಿನ ತಾಲ್ಲೂಕುಗಳಲ್ಲಿ ಹೈಟೆಕ್ ಸೌಲಭ್ಯಗಳನ್ನು ಒಳಗೊಂಡ ಟೌನ್ಶಿಪ್ ಗಳನ್ನು ನಿರ್ಮಿಸುವ ಸರ್ಕಾರದ ಯೋಜನೆಯ ಭಾಗವಾಗಿ ಕಸಬಾ ಹೋಬಳಿಯ ರಾಜಘಟ್ಟ, ತಿಮ್ಮಸಂದ್ರ ಗ್ರಾಮ, ಹಾಗೆಯೇ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ಸಮೀಪ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದರು.
ಈ ಹಿಂದಿನ ಸರ್ಕಾರದಲ್ಲಿ ಬೆಂಗಳೂರು ಸುತ್ತಲಿನ ತಾಲ್ಲೂಕುಗಳನ್ನು ಹಾದುಹೋಗುವಂತೆ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಲನಕ್ಷೆ ಗುರುತಿಸಲಾಗಿತ್ತು. ಈ ರಿಂಗ್ ರಸ್ತೆಯು ರಾಮನಗರ ಜಿಲ್ಲೆಯ ಸಾತನೂರು ಸಮೀಪದಿಂದ ಪ್ರಾರಂಭವಾಗಿ ಬಿಡದಿ, ಮಾಗಡಿ, ಸೋಲೂರು, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಂದಗುಡಿ, ಆನೇಕಲ್ ತಾಲ್ಲೂಕಿನ ಮೂಲಕ ಮತ್ತೆ ಸಾತನೂರು ಸೇರಲಿದೆ ಎಂದರು.
ರಿಂಗ್ ರಸ್ತೆ ನಿರ್ಮಾಣದಿಂದ ಅಂತರ ರಾಜ್ಯಗಳ ಹೆದ್ದಾರಿ, ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ. ನೂತನ ಟೌನ್ ಶಿಪ್ ಗಳನ್ನು ಸಹ ರಿಂಗ್ ರಸ್ತೆಗೆ ಸಮೀಪದಲ್ಲೇ ನಿರ್ಮಿಸುವ ಉದ್ದೇಶದೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಯಾವುದನ್ನು ಇನ್ನು ಅಂತಿಮಗೊಳಿಸಿಲ್ಲ. ಟೌನ್ ಶಿಪ್ ನಿರ್ಮಾಣದ ಸಾಧ್ಯತೆ, ಅನುಕೂಲಗಳ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…