ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ. ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಬೈಕ್ ನ್ನು ಪೊಲೀಸರು ದಿಢೀರ್ ಅಡ್ಡಗಟ್ಟಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಈ ವೇಳೆ ಬೈಕ್ ನಲ್ಲಿದ್ದ ಮಗು ಕೆಳಗೆ ಜಾರಿ ಬಿದ್ದಿದ್ದು, ಮಗು ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ. ಗಂಭೀರ ಪೆಟ್ಟಾಗಿ ಮಗು ಸಾವನ್ನಪ್ಪಿದೆ.
ಮಗುವಿನ ಸಾವಿಗೆ ಪೊಲೀಸರ ನೇರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಗುವಿನ ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪೊಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್ಐಗಳನ್ನು ಅಮಾನತು ಮಾಡಿದ್ದಾರೆ.
ಈ ಬಗ್ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಎಎಸ್ಐಗಳಾದ ಜಯರಾಮ್, ನಾಗರಾಜ್, ಗುರುದೇವ್ ಅಮಾನತುಗೊಂಡವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…