ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.
ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.
ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು
ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.
ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.
ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.
ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…