ಟ್ರಾವಿಸ್ ಹೆಡ್ ಶತಕಕ್ಕೆ ಶರಣಾದ ಟೀಂ ಇಂಡಿಯಾ, ಆಸ್ಟ್ರೇಲಿಯಾದ ಮುಡಿಗೆ 6ನೇ ಏಕದಿನ ವಿಶ್ವಕಪ್!

ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.

ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ  ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.

ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.

ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು

ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ನಾಲ್ಕು ಬೌಂಡರಿ ನೆರವಿನಿಂದ (54) ರನ್ ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ ಟೂರ್ನಿಯಲ್ಲಿ ಮಿಂಚಿದ್ದ ಶ್ರೇಯಸ್ ಅಯ್ಯರ್ (4) ಫೈನಲ್ ಪಂದ್ಯದಲ್ಲಿ ರನ್ ಗಳಿಸದೆ ಪೆವಿಲಿಯನ್ ಗೆ ತೆರಳಿದರು.

ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.

ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.

ಆಸ್ಟ್ರೇಲಿಯಾದ ಪರವಾಗಿ ವೇಗದ ಬೌಲರ್ ಮಿಚೆಲ್ ಸ್ಟ್ರಾಕ್ 3 , ಜೋಶ್ ಹೆಜಲ್ವುಡ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ ಎರಡು ವಿಕೆಟ್ , ಮ್ಯಾಕ್ಸ್ ವೆಲ್ ಹಾಗೂ ಜಂಪಾ ತಲಾ ಒಂದು ವಿಕೆಟ್ ಪಡೆದು ಭಾರತ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದರು.

ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.

ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾಯ೯ದಶಿ೯ ಜಯ್ ಷಾ ಸೇರಿದಂತೆ ಹಲವಾರು ಗಣ್ಯರು ಹಾಗೂ ಬಾಲಿವುಡ್ ನಟ ನಟಿಯರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 hour ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

2 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

9 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

9 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

15 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago