ಟ್ರಾವಿಸ್ ಹೆಡ್ ಶತಕಕ್ಕೆ ಶರಣಾದ ಟೀಂ ಇಂಡಿಯಾ, ಆಸ್ಟ್ರೇಲಿಯಾದ ಮುಡಿಗೆ 6ನೇ ಏಕದಿನ ವಿಶ್ವಕಪ್!

ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.

ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ  ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.

ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.

ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು

ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ನಾಲ್ಕು ಬೌಂಡರಿ ನೆರವಿನಿಂದ (54) ರನ್ ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ ಟೂರ್ನಿಯಲ್ಲಿ ಮಿಂಚಿದ್ದ ಶ್ರೇಯಸ್ ಅಯ್ಯರ್ (4) ಫೈನಲ್ ಪಂದ್ಯದಲ್ಲಿ ರನ್ ಗಳಿಸದೆ ಪೆವಿಲಿಯನ್ ಗೆ ತೆರಳಿದರು.

ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.

ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.

ಆಸ್ಟ್ರೇಲಿಯಾದ ಪರವಾಗಿ ವೇಗದ ಬೌಲರ್ ಮಿಚೆಲ್ ಸ್ಟ್ರಾಕ್ 3 , ಜೋಶ್ ಹೆಜಲ್ವುಡ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ ಎರಡು ವಿಕೆಟ್ , ಮ್ಯಾಕ್ಸ್ ವೆಲ್ ಹಾಗೂ ಜಂಪಾ ತಲಾ ಒಂದು ವಿಕೆಟ್ ಪಡೆದು ಭಾರತ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದರು.

ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.

ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾಯ೯ದಶಿ೯ ಜಯ್ ಷಾ ಸೇರಿದಂತೆ ಹಲವಾರು ಗಣ್ಯರು ಹಾಗೂ ಬಾಲಿವುಡ್ ನಟ ನಟಿಯರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

11 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

12 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago