ಟ್ರಾವಿಸ್ ಹೆಡ್ ಶತಕಕ್ಕೆ ಶರಣಾದ ಟೀಂ ಇಂಡಿಯಾ, ಆಸ್ಟ್ರೇಲಿಯಾದ ಮುಡಿಗೆ 6ನೇ ಏಕದಿನ ವಿಶ್ವಕಪ್!

ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.

ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ  ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.

ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.

ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು

ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ನಾಲ್ಕು ಬೌಂಡರಿ ನೆರವಿನಿಂದ (54) ರನ್ ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ ಟೂರ್ನಿಯಲ್ಲಿ ಮಿಂಚಿದ್ದ ಶ್ರೇಯಸ್ ಅಯ್ಯರ್ (4) ಫೈನಲ್ ಪಂದ್ಯದಲ್ಲಿ ರನ್ ಗಳಿಸದೆ ಪೆವಿಲಿಯನ್ ಗೆ ತೆರಳಿದರು.

ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.

ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.

ಆಸ್ಟ್ರೇಲಿಯಾದ ಪರವಾಗಿ ವೇಗದ ಬೌಲರ್ ಮಿಚೆಲ್ ಸ್ಟ್ರಾಕ್ 3 , ಜೋಶ್ ಹೆಜಲ್ವುಡ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ ಎರಡು ವಿಕೆಟ್ , ಮ್ಯಾಕ್ಸ್ ವೆಲ್ ಹಾಗೂ ಜಂಪಾ ತಲಾ ಒಂದು ವಿಕೆಟ್ ಪಡೆದು ಭಾರತ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದರು.

ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.

ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾಯ೯ದಶಿ೯ ಜಯ್ ಷಾ ಸೇರಿದಂತೆ ಹಲವಾರು ಗಣ್ಯರು ಹಾಗೂ ಬಾಲಿವುಡ್ ನಟ ನಟಿಯರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

18 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago