ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.
ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.
ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು
ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.
ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.
ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.
ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…