ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.
ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.
ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು
ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.
ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.
ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.
ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…