ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.
ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.
ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು
ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.
ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.
ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.
ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…