ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.
ತೆಲಂಗಾಣದ ಉಮಾಹರತಿ ಅವರು ಯುಪಿಎಸ್ಸಿ ಸಿವಿಲ್ಸ್-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.
ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.
ಉಮಾಹರತಿ ಅವರು ಐಐಟಿ ಹೈದರಾಬಾದ್ನಿಂದ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…