Categories: ವೈರಲ್

ಟ್ರೈನಿ ಐಎಎಸ್ ಮಗಳಿಗೆ ಐಪಿಎಸ್ ಅಪ್ಪನಿಂದ ಹೆಮ್ಮೆಯ ಸೆಲ್ಯೂಟ್

ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.

ತೆಲಂಗಾಣದ ಉಮಾಹರತಿ ಅವರು ಯುಪಿಎಸ್​​​ಸಿ ಸಿವಿಲ್ಸ್​-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್​​ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್​ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.

ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.

ಉಮಾಹರತಿ ಅವರು ಐಐಟಿ ಹೈದರಾಬಾದ್‌ನಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್‌ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

23 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago