ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.
ತೆಲಂಗಾಣದ ಉಮಾಹರತಿ ಅವರು ಯುಪಿಎಸ್ಸಿ ಸಿವಿಲ್ಸ್-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.
ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.
ಉಮಾಹರತಿ ಅವರು ಐಐಟಿ ಹೈದರಾಬಾದ್ನಿಂದ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.
ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…
ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶಿಸಿದ್ದಾರೆ. ಎ.ಬಿ.…
ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…
ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…
ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು…