ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.
ತೆಲಂಗಾಣದ ಉಮಾಹರತಿ ಅವರು ಯುಪಿಎಸ್ಸಿ ಸಿವಿಲ್ಸ್-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.
ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.
ಉಮಾಹರತಿ ಅವರು ಐಐಟಿ ಹೈದರಾಬಾದ್ನಿಂದ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…